ಮಲಪ್ರಭಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡುಗಡೆ

By: Ommnews

Date:

Share post:

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲ ಹಿನ್ನೆಲೆ ಮಲಪ್ರಭಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಯಿತು.

Advertisement
Advertisement
Advertisement

ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ಜಾಕ್ ವೆಲ್‌ನಿಂದ ನೀರು ರಿಲೀಸ್ ಮಾಡಲಾಗಿದೆ. ನಾಲ್ಕು ಜಿಲ್ಲೆಯ 14 ತಾಲೂಕಿನಲ್ಲಿ ಕುಡಿಯುವ ಸಲುವಾಗಿ ನೀರು ಬಿಡುಗಡೆ ಮಾಡಲಾಗಿದ್ದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆ ಸೇರಿ ಒಟ್ಟು 14 ತಾಲೂಕುಗಳಿಗೆ ನೀರು ಹರಿಸಲಾಗಿದೆ. ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ, ನವಲಗುಂದ ಶಾಸಕ ಎನ್.ಹೆಚ್ ಕೋನರೆಡ್ಡಿ ಅವರಿಂದ ನೀರು ರಿಲೀಸ್ ಮಾಡಲಾಗಿದೆ.

ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯದಿಂದ ನಿತ್ಯವೂ 1,000 ಕ್ಯೂಸೆಕ್‌ನಷ್ಟು ನೀರನ್ನು ಕಾಲುವೆಗೆ ಬಿಡುಗಡೆ ಮಾಡಲಾಗುತ್ತದೆ. ಮಲಪ್ರಭಾ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಮಳೆ ಕೊರತೆಯಿಂದ 21 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ. 15 ದಿನಗಳ ಕಾಲ ಒಂದೂವರೆ ಟಿಎಂಸಿ ನೀರು ಕಾಲುವೆಗೆ ಬಿಡುಗಡೆ ಮಾಡಲು ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಬೆಳಗಾವಿ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದರು. ಇದಲ್ಲದೇ ಸವದತ್ತಿ, ಧಾರವಾಡ ಜಿಲ್ಲೆಯಲ್ಲಿ ನೀರು ಬಿಡುವಂತೆ ರೈತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಶುಕ್ರವಾರದಿಂದ ಐದು ದಿನಗಳ ಕಾಲ ನೀರು ಬಿಡುಗಡೆ ಮಾಡಲಾಗುತ್ತಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section