ರಾಷ್ಟ್ರ

ಜಿ 20 ಶೃಂಗಸಭೆ: ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿ ಜತೆ ಸಂವಾದ ನಡೆಸಿದ ಪ್ರಧಾನಿ ಮೋದಿ

ನವದೆಹಲಿ, ಸೆ. 22: ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ಜರುಗಿದ ಜಿ 20 ಶೃಂಗಸಭೆಯ ಯಶಸ್ಸಿಗಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿ ಜತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ಸಂವಾದ ನಡೆಸಿದರು. ಶೃಂಗಸಭೆ ನಡೆದ ಭಾರತ ಮಂಟಪದಲ್ಲಿ ಪ್ರಧಾನಿಯವರು ಸಂವಾದ ನಡೆಸಿದರು. ಸಿಬ್ಬಂದಿವರ್ಗವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜಿ 20 ಶೃಂಗಸಭೆಯ ಯಶಸ್ಸಿಗೆ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದವರೇ ಮುಖ್ಯ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ವ್ಯಾಪಕವಾದ ಯೋಜನೆ ಮತ್ತು ಅನುಷ್ಠಾನ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಸಿಬ್ಬಂದಿ ತಮ್ಮ ಅನುಭವಗಳು ಮತ್ತು ಕಲಿಕೆಗಳನ್ನು ದಾಖಲಿಸಲು ಹೇಳಿದರು. ಹೀಗೆ ಸಿದ್ಧಪಡಿಸಿದ ದಾಖಲೆಗಳು ಭವಿಷ್ಯದ ಕಾರ್ಯಕ್ರಮಗಳಿಗೆ ಉಪಯುಕ್ತ ಮಾರ್ಗಸೂಚಿಗಳನ್ನು ಒದಗಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Advertisement
Advertisement
Advertisement

ಇಂತಹ ದೊಡ್ಡ-ಪ್ರಮಾಣದ ಕಾರ್ಯಕ್ರಮಗಳ ಯಶಸ್ಸಿನ ರಹಸ್ಯವೆಂದರೆ, ಉದ್ಯಮದ ಪ್ರಾಮುಖ್ಯತೆಯ ಪ್ರಜ್ಞೆ ಮತ್ತು ಪ್ರತಿಯೊಬ್ಬರೂ ಉದ್ಯಮದ ಕೇಂದ್ರದಲ್ಲಿದ್ದೇವೆ ಎಂದು ಭಾವಿಸುವುದಾಗಿದೆ ಎಂದು ಮೋದಿ ಹೇಳಿದರು.

ಅನೌಪಚಾರಿಕವಾಗಿ ಭೇಟಿಯಾಗಲು ಮತ್ತು ಆಯಾ ಇಲಾಖೆಗಳಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಪ್ರಧಾನ ಮಂತ್ರಿಯವರು ಸಿಬ್ಬಂದಿಗೆ ಹೇಳಿದರು. ಪ್ರತಿಯೊಬ್ಬ ವ್ಯಕ್ತಿಯ ಕಾರ್ಯಕ್ಷಮತೆಯನ್ನು ವಿಶಾಲವಾಗಿ ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ. ಇತರರ ಪ್ರಯತ್ನಗಳನ್ನು ತಿಳಿದುಕೊಳ್ಳುವುದು ನಮ್ಮನ್ನು ಉತ್ತಮವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ ಎಂದು ಮೋದಿ ಹೇಳಿದರು.

ನಿತ್ಯದ ಕಚೇರಿ ಕೆಲಸದಲ್ಲಿ ನಮ್ಮ ಸಹೋದ್ಯೋಗಿಗಳ ಸಾಮರ್ಥ್ಯದ ಅರಿವು ನಮಗೆ ಆಗುವುದಿಲ್ಲ. ಆದರೆ, ತಳಮಟ್ಟದಲ್ಲಿ ಒಟ್ಟಿಗೆ ಕೆಲಸ ಮಾಡುವಾಗ, ದೂರ ಮತ್ತು ಅಪರಿಚಿತತೆಗಳು ಸೇತುವೆಯಾಗುತ್ತವೆ. ಅದು ತಂಡವಾಗಿ ಕೆಲಸ ಮಾಡಲು ಅನುಕೂಲ ಒದಗಿಸುತ್ತದೆ. ಸ್ವಚ್ಛತಾ ಅಭಿಯಾನದ ಉದಾಹರಣೆಯೊಂದಿಗೆ ಅವರು ಈ ವಿಷಯವನ್ನು ವಿವರಿಸಿದರು. ಜತೆಗೆ, ಇಲಾಖೆಗಳಲ್ಲಿ ಸಾಮೂಹಿಕ ಪ್ರಯತ್ನವನ್ನು ಮಾಡುವಂತೆ ಕೇಳಿಕೊಂಡರು. ಇದರಿಂದ ಯೋಜನೆ, ಕೆಲಸ ಕಾರ್ಯ ಹಬ್ಬವಾಗಲಿದೆ ಎಂದರು. ಸಾಮೂಹಿಕ ಮನೋಭಾವದಲ್ಲಿ ಶಕ್ತಿ ಇದೆ ಎಂದರು.

ಕ್ಲೀನರ್‌ಗಳು, ಚಾಲಕರು ಮತ್ತು ವಿವಿಧ ಸಚಿವಾಲಯಗಳ ಇತರ ಸಿಬ್ಬಂದಿ ಸೇರಿದಂತೆ ಜಿ20 ಶೃಂಗಸಭೆಯ ಯಶಸ್ಸಿಗೆ ಕೊಡುಗೆ ನೀಡಿದ ಸುಮಾರು 3000 ಜನರು ಈ ಸಂವಾದದಲ್ಲಿ ಭಾಗವಹಿಸಿದ್ದರು. ಸಂವಾದದಲ್ಲಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago