ಅಂತರಾಷ್ಟ್ರೀಯ

ಸಿಗರೇಟ್ ನಿಷೇಧಿಸಲು ಚಿಂತನೆ ನಡೆಸಿದ ಬ್ರಿಟನ್​ನ ಪ್ರಧಾನಿ

ಬ್ರಿಟನ್​ನಲ್ಲಿ ಸಿಗರೇಟ್​ ನಿಷೇಧಿಸಲು ಪ್ರಧಾನಿ ರಿಷಿ ಸುನಕ್ ಚಿಂತನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2009ರ ಜನವರಿ 1ರಂದು ಅಥವಾ ನಂತರ ಜನಿಸಿರುವವರಿಗೆ ತಂಬಾಕು ಮಾರಾಟ ಮಾಡುವುದನ್ನು ನಿಷೇಧಿಸುವುದು ಸೇರಿದಂತೆ ಹಲವು ಧೂಮಪಾನ ವಿರೋಧಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಸರ್ಕಾರಿ ಮೂಲಗಳ ಪ್ರಕಾರ, ಮುಂದಿನ ಪೀಳಿಗೆಯವರು ಸಿಗರೇಟ್ ಖರೀದಿಸುವುದನ್ನು ತಡೆಯಲು ಯೋಚಿಸುತ್ತಿದ್ದಾರೆ.

Advertisement
Advertisement
Advertisement

ದೂಮಪಾನ ತ್ಯಜಿಸುವುದು ಹಾಗೂ 2030ರ ವೇಳೆಗೆ ಯುವಕರನ್ನು ಧೂಮಪಾನ ಮುಕ್ತರನ್ನಾಗಿ ಮಾಡಲು ಬಯಸುತ್ತೇನೆ, ಅದಕ್ಕಾಗಿ ನಾವು ಈಗಾಗಲೇ ಸಿಗರೇಟ್ ಉತ್ಪಾದನಾ ಪ್ರಮಾಣವನ್ನು ಕಡಿಮೆ ಮಾಡಲು ಕ್ರಮಗಳನ್ನು ಕೈಗೊಂಡಿದ್ದೇವೆ. ಗರ್ಭಿಣಿಯರು ಸಿಗರೇಟ್ ತ್ಯಜಿಸಲು ಪ್ರೋತ್ಸಾಹಿಸುವ ವೋಚರ್ ಯೋಜನೆಯಂತಹ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಜುಲೈನಲ್ಲಿ ಬ್ರಿಟನ್ ಹಾಗೂ ವೇಲ್ಸ್‌ನ ಕೌನ್ಸಿಲ್‌ಗಳು ಪರಿಸರ ಹಾಗೂ ಜನರ ಆರೋಗ್ಯದ ಆಧಾರದ ಮೇಲೆ 2024ರ ವೇಳೆಗೆ ಏಕಬಳಕೆಯ ವೇಪ್‌ಗಳ ಮಾರಾಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕರೆ ನೀಡಿವೆ. ಮುಂದಿನ ವರ್ಷದ ನಿರೀಕ್ಷಿತ ಚುನಾವಣೆಗೆ ಮುನ್ನ ಸುನಕ್ ತಂಡವು ಹೊಸ ಗ್ರಾಹಕ-ಕೇಂದ್ರಿತ ಯೋಜನೆಯನ್ನು ರೂಪಿಸಿದೆ.

ವೇಪ್‌ಗಳು ಇ-ಸಿಗರೆಟ್‌ಗಳಾಗಿವೆ, ಇದು ಏರೋಸಾಲ್ ಅನ್ನು ಉತ್ಪಾದಿಸುವ ಬ್ಯಾಟರಿ ಚಾಲಿತ ಸಾಧನವಾಗಿದೆ. ಇದು ನಿಕೋಟಿನ್, ಸುವಾಸನೆ ಮತ್ತು 30 ಕ್ಕೂ ಹೆಚ್ಚು ಇತರ ರಾಸಾಯನಿಕಗಳನ್ನು ಒಳಗೊಂಡಿದೆ. ಏರೋಸಾಲ್ ಶ್ವಾಸಕೋಶವನ್ನು ಪ್ರವೇಶಿಸುತ್ತದೆ, ಅಲ್ಲಿ ನಿಕೋಟಿನ್ ಮತ್ತು ರಾಸಾಯನಿಕಗಳು ನಿಮ್ಮ ರಕ್ತಪ್ರವಾಹವನ್ನು ಪ್ರವೇಶಿಸುತ್ತವೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago