ರಾಜ್ಯ

9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ನಿರ್ಧರಿಸಿದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಬೆಂಗಳೂರು, ಸೆ.23: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ತುಂಬಾ ಬದಲಾವಣೆಗಳು ಆಗುತ್ತಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​​ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಮಕ್ಕಳ ಕಲಿಕಾ ದೃಷ್ಟಿಯಿಂದ ಒಂಬತ್ತನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತದೆ. ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಪರೀಕ್ಷಾ ಮಂಡಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement

ಸಾಕಷ್ಟು ವಿರೋಧಗಳ ಮಧ್ಯೆಯೇ ಪ್ರಸಕ್ತ 2023-24 ನೇ ಸಾಲಿನಲ್ಲಿಯೇ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆಯನ್ನು ಇಲಾಖೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲಾ ಅನುದಾನಿತ, ಸರ್ಕಾರಿ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಕಳೆದ ವರ್ಷವಷ್ಟೇ 5 ಮತ್ತು 8 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿತ್ತು.

ಪ್ರಥಮ ಪಿಯು ಪರೀಕ್ಷೆ ಹೇಗಿರುತ್ತೆ

1.ದ್ವಿತೀಯ ಪಿಯುಸಿಯಲ್ಲಿ ಪರೀಕ್ಷಾ ಮೌಲ್ಯ ಮಾಪನ ಬೇರೆ ಕಡೆ ನಡೆಯುತ್ತೆ, ಆದರೆ ಪ್ರಥಮ ಪಿಯು ಪರೀಕ್ಷೆ ಮೌಲ್ಯಮಾಪನ ಆಯಾ ಕಾಲೇಜುಗಳಲ್ಲಿ ನಡೆಯುತ್ತೆ.

2. ದ್ವೀತಿಯ ಪಿಯು ಪರೀಕ್ಷೆಯಲ್ಲಿ ಇರುವ ಹಾಗೇ ಮೇಲ್ವಿಚಾರಕರು ಪ್ರಥಮ ಪಿಯುಸಿಯಲ್ಲೂ ಇರುತ್ತಾರೆ.

3. ದ್ವೀತಿಯ ಪಿಯು ಪರೀಕ್ಷೆ ಹಾಗೆಯೇ ಇಲ್ಲಿಯೂ ಪರೀಕ್ಷಾ ಪ್ರಕ್ರಿಯೆ ನಡೆಯುತ್ತೆ.

4. ಪ್ರಶ್ನೆ ಪತ್ರಿಕೆಯನ್ನು ಇಲ್ಲಿಯೂ ಕೂಡ ಪಿಯು ಬೋರ್ಡ್​​ದಿಂದಲೇ ಕಳುಹಿಸಲಾಗುತ್ತದೆ.

5. ಮೊದಲು ವಾರ್ಷಿಕವಾಗಿ ಒಂದು ಪರೀಕ್ಷೆ ನಡೆಸಲಾಗುತ್ತದೆ.

6. ಅನುತ್ತೀರ್ಣ ಆದರೆ ಮತ್ತೊಂದು ಪೂರಕ ಪರೀಕ್ಷೆ ನಡೆಸಲಾಗುತ್ತದೆ.

7. ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣರಾದ ಮೇಲೆ ಮುಂದೇನು ಎಂಬುವುದರ ಬಗ್ಗೆ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಳಿ ಉತ್ತರ ಇಲ್ಲ.

8. ಪರೀಕ್ಷೆಯ ಪ್ರಕ್ರಿಯೆ ದ್ವೀತಿಯ ಪಿಯು ಹಾಗೇ ಇರುತ್ತೆ, ಆದರೆ ಮೌಲ್ಯಮಾಪನ ಕಾಲೇಜು ಹಂತದಲ್ಲಿ ಮಾಡಲಾಗುತ್ತೆ.

9ನೇ ತರಗತಿ ಸಂಕಲನತ್ಮಕ ಮೌಲ್ಯಾ ಮಾಪನ ಪ್ರಶ್ನೆ

  1. 1. ಇದು ಮೊದಲಿನ ಹಾಗೆ 5 ಮತ್ತು 8 ನೇ ತರಗತಿ ಪರೀಕ್ಷೆ ನಡೆದ ತರಹ ನಡೆಯುತ್ತೆ.

2. ಇಲ್ಲಿ ಪರೀಕ್ಷೆಯನ್ನು ಜಿಲ್ಲಾ ಹಂತದಲ್ಲೇ ಮಾಡಲಾಗುತ್ತೆ.

3. ಆಯಾ ಶಾಲೆಯ ಶಿಕ್ಷಕರೇ ಪರೀಕ್ಷೆ ನಡೆಸುತ್ತಾರೆ, ಮೌಲ್ಯಮಾಪನ ಮಾಡುತ್ತಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago