ಬೆಂಗಳೂರು ಕಂಬಳಕ್ಕೆ ದಿನಗಣನೆ-ಸ್ಥಳ ಪರಿಶೀಲನೆ ನಡೆಸಿದ ಶಾಸಕ ಅಶೋಕ್ ರೈ ನೇತೃತ್ವದ ನಿಯೋಗ..!

By: Ommnews

Date:

Share post:

ಬೆಂಗಳೂರು : ತುಳುನಾಡಿನ ಜನಪದ ಕಲೆಯಾದ ಕಂಬಳವನ್ನು ಇದೇ ಮೊದಲ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ.

Advertisement
Advertisement
Advertisement

ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ ಹಾಗೂ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಈ ಕಂಬಳದ ಉಸ್ತುವಾರಿ ವಹಿಸಿದ್ದಾರೆ.

ಈ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.

ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕರಾದ ರೈ ನೇತೃತ್ವದ ಕಂಬಳ ನಿಯೋಗವು ಶುಕ್ರವಾರ ಅರಮನೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ ಕುದ್ರೈಾಡಿ, ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ರ ಮೊದಲಾದವರು ಉಪಸ್ಥಿತರಿದ್ದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section