ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ನಗರ ಬಂದ್

ಬೆಂಗಳೂರು, ಸೆ.23: ಕಾವೇರಿ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ಬೆಂಗಳೂರಿನ ನಾಗರಿಕ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಡೆದ ಕಾವೇರಿ ಹೋರಾಟ ಜಾಗೃತಿ ಸಭೆಯಲ್ಲಿ ಮಂಗಳವಾರ ಬೆಂಗಳೂರು‌ ಬಂದ್ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿದೆ. ಸೆ. 26ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಟೌನ್​ಹಾಲ್​ನಿಂದ SBM ವೃತ್ತದವರೆಗೆ ರ‍್ಯಾಲಿ ಹಮ್ಮಿಕೊಳ್ಳಲಾಗುತ್ತೆ ಎಂದು ಸಭೆ ಬಳಿಕ ಫ್ರೀಡಂಪಾರ್ಕ್​ನಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

Advertisement
Advertisement
Advertisement

ಬೆಂಗಳೂರು ನಗರ ಬಂದ್​​ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಈ ಬಗ್ಗೆ ಫ್ರೀಡಂಪಾರ್ಕ್​ನಲ್ಲಿ ಕುರುಬೂರು ಶಾಂತಕುಮಾರ್ ಅವರು, ಸೆ.26ರಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿದ್ದಾರೆ. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ಐಟಿ ಕಂಪನಿಗಳು, ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡಬೇಕು. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಬೆಂಬಲಿಸಬೇಕು. ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆದು ನಿರ್ಣಯ ಕೈಗೊಳ್ಳಲಿ. ಸುಪ್ರೀಂಕೋರ್ಟ್​ ಕೂಡಲೇ CWRC, CWMA ರದ್ದು ಮಾಡಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ಸಿನಿಮಾ ರಂಗದವರನ್ನ ಜನಸಾಮಾನ್ಯರು ಬೆಳೆಸಿದ್ದಾರೆ. ಸಿನಿಮಾ ನಟರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬರಬೇಕು. ಸಭೆಗೆ ಬಾರದೆ ಇರುವವರನ್ನ ಭೇಟಿಯಾಗಿ ಮಾತನಾಡುತ್ತೇವೆ. ಇಡೀ ಚಿತ್ರೋದ್ಯಮ ಒಂದು ದಿನ ಚಟುವಟಿಕೆ ನಿಲ್ಲಿಸಿ ಬೆಂಬಲ ನೀಡಬೇಕು. ಅಲ್ಲದೆ ಐಟಿ ಕಂಪನಿಗಳು ಸ್ವಯಂ ಪ್ರೇರಿತವಾಗಿ ಕೆಲಸಕ್ಕೆ ಗೈರಾಗಿ ಬೆಂಬಲ ನೀಡಬೇಕು. ಇಂದು ಸರ್ಕಾರ ತಮಿಳುನಾಡಿಗೆ ನೀರನ್ನು ಹರಿಸ್ತಿದ್ದಾರೆ. ಈ ಕೂಡಲೇ ನೀರನ್ನ ಹರಿಸುವ ಕೆಲಸವನ್ನು ನಿಲ್ಲಿಸಬೇಕು. ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ಬೆಂಗಳೂರು ನಗರವನ್ನು ಕಾವೇರಿ ನೀರಿನ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಈಗಾಗಲೇ ಮಂಡ್ಯದಲ್ಲಿ ಬಂದ್ ಮಾಡಿದ್ದಾರೆ. ಮಂಗಳವಾರ ಬೆಂಗಳೂರು ಬಂದ್ ನಿಶ್ಚಿತ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.

ಮಂಗಳವಾರ ಬೆಂಗಳೂರು ಬಂದ್​ಗೆ ಓಲಾ, ಉಬರ್ ಸಂಘದಿಂದ ಬೆಂಬಲ

ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿರುವ ಬೆಂಗಳೂರು‌ ಬಂದ್​ಗೆ ಓಲಾ, ಉಬರ್ ಸಂಘಗಳು ಬೆಂಬಲ ನೀಡಿವೆ. ಬೆಂಗಳೂರಿನಾದ್ಯಂತ ಮಂಗಳವಾರ ಓಲಾ, ಉಬರ್ ಓಡಿಸದಿರಲು ನಿರ್ಧಾರ ಮಾಡಿವೆ. ಈ ಬಗ್ಗೆ ಓಲಾ, ಉಬರ್ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಮಾಹಿತಿ ನೀಡಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago