ರಾಜಕೀಯ

ತುಮಕೂರು ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸಲು ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ ಜಿ.ಎಸ್.ಬಸವರಾಜು

ತುಮಕೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಜನರು ವೋಟು ಹಾಕುವುದಿಲ್ಲ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೇಳಿದರು.

Advertisement
Advertisement
Advertisement

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಿಂದ ದೇವೇಗೌಡರ ಸ್ಪರ್ಧೆ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದರು. ನಮ್ಮ ಪಕ್ಷದವರು ಮೈತ್ರಿ ಮಾಡಿಕೊಂಡು ಜಿಲ್ಲೆಯಿಂದ ದೇವೇಗೌಡರನ್ನು ನಿಲ್ಲಿಸಲು ಹೊರಟಿದ್ದಾರೆ. ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಗೆ ಗೌಡರು ಕಂಡರಿಯದಷ್ಟು ಮೋಸ ಮಾಡಿದ್ದಾರೆ. ಯಾರಿಗಾದರೂ ವೋಟ್ ಹಾಕಲಿ. ಗೌಡರಿಗೆ ವೋಟ್ ಹಾಕಬಾರದು. ಅವರಿಗೆ ವೋಟ್ ಹಾಕಿದರೆ ಜಿಲ್ಲೆಯ ಜನತೆ ಪಾಪ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

ಲೋಕಸಭೆಗೆ ಜೆಡಿಎಸ್‌ನವರು ಐದು ಕ್ಷೇತ್ರ ಕೇಳಿದ್ದು, ತುಮಕೂರನ್ನು ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ರಕ್ತ ಕೊಟ್ಟರೂ ಜಿಲ್ಲೆಗೆ ಹೇಮಾವತಿ ನೀರು ಕೊಡಲ್ಲ ಎಂದು ಹೇಳಿದ್ದ ದೇವೇಗೌಡರನ್ನು ಇಲ್ಲಿನ ಜನರು ಒಮ್ಮೆ ಸೋಲಿಸಿದ್ದಾರೆ. ಅವರ ಸಂಬಂಧಿಗಳೂ ವೋಟ್ ಹಾಕಲ್ಲ. ಒಕ್ಕಲಿಗ ಸಮುದಾಯದ ಒಬ್ಬರೂ ಮತ ಹಾಕಲ್ಲ ಎಂದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago