ಕ್ರೀಡಾ ಸುದ್ದಿ

15 ವರ್ಷಗಳ ಬಳಿಕ ಬಾಂಗ್ಲಾದೇಶ್ ವಿರುದ್ಧ ನ್ಯೂಝಿಲೆಂಡ್ ಗೆ ಐತಿಹಾಸಿಕ ಗೆಲುವು

ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಡೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕಿವೀಸ್ ಪಡೆ 15 ವರ್ಷಗಳ ಬಳಿಕ ಬಾಂಗ್ಲಾ ನೆಲದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಗೆಲುವಿನ ನಗೆ ಬೀರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಲಾಕಿ ಫರ್ಗುಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಿನ್ ಅಲೆನ್ (12) ಹಾಗೂ ವಿಲ್ ಹಂಗ್ (0) ಮೊದಲ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದರು. ಇನ್ನು ಚಡ್ ಬೌವ್ಸ್ 14 ರನ್​ಗಳಿಸಿದರೆ, ಹೆನ್ರಿ ನಿಕೋಲ್ಸ್ 49 ರನ್ ಬಾರಿಸಿದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಬ್ಲಂಡೆಲ್ 66 ಎಸೆತಗಳಲ್ಲಿ 68 ರನ್ ಬಾರಿಸಿ ತಂಡಕ್ಕೆ ಆಸರೆಯಾದರು.

ಮತ್ತೊಂದೆಡೆ ಇಶ್ ಸೋಧಿ 35 ರನ್​ಗಳ ಕಾಣಿಕೆ ನೀಡಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 49.2 ಓವರ್​ಗಳಲ್ಲಿ 254 ರನ್​ಗಳಿಸಿ ನ್ಯೂಝಿಲೆಂಡ್ ತಂಡವು ಆಲೌಟ್ ಆಯಿತು.

255 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡದ ಪರ ಆರಂಭಿಕ ತಮೀಮ್ ಇಕ್ಬಾಲ್ 58 ಎಸೆತಗಳಲ್ಲಿ 44 ರನ್ ಬಾರಿಸಿದ್ದರು. ಆದರೆ ಉಳಿದ ಬ್ಯಾಟರ್​ಗಳನ್ನು ಬೇಗನೆ ಪೆವಿಲಿಯನ್​ಗೆ ಕಳುಹಿಸುವಲ್ಲಿ ಸ್ಪಿನ್ನರ್ ಇಶ್ ಸೋಧಿ ಯಶಸ್ವಿಯಾದರು.

ಇದಾಗ್ಯೂ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಹಮದುಲ್ಲಾ 76 ಎಸೆತಗಳಲ್ಲಿ 49 ರನ್ ಬಾರಿಸಿದರು. ಆದರೆ ಇಶ್ ಸೋಧಿ ಸ್ಪಿನ್ ಮೋಡಿಗೆ ಪೆವಿಲಿಯನ್ ಪರೇಡ್ ನಡೆಸಿದ ಬಾಂಗ್ಲಾ ಆಟಗಾರರು 41.1 ಓವರ್​ಗಳಲ್ಲಿ 168 ರನ್​ಗಳಿಗೆ ಆಲೌಟ್ ಆಯಿತು. ನ್ಯೂಝಿಲೆಂಡ್ ಪರ 10 ಓವರ್​ಗಳಲ್ಲಿ 39 ರನ್ ನೀಡಿ ಇಶ್ ಸೋಧಿ 6 ವಿಕೆಟ್ ಕಬಳಿಸಿ ಮಿಂಚಿದರು.

ಕಿವೀಸ್ ಪಡೆಗೆ ಐತಿಹಾಸಿಕ ಗೆಲುವು:

ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶದಲ್ಲಿ ಬಾಂಗ್ಲಾ ವಿರುದ್ಧ ಏಕದಿನ ಪಂದ್ಯ ಗೆದ್ದು ಬರೋಬ್ಬರಿ 15 ವರ್ಷಗಳೇ ಕಳೆದಿತ್ತು. ಅಂದರೆ 2008 ರಲ್ಲಿ ಕಿವೀಸ್ ಪಡೆ ಕೊನೆಯ ಬಾರಿ ಬಾಂಗ್ಲಾದೇಶ್​ನಲ್ಲಿ ಏಕದಿನ ಪಂದ್ಯ ಗೆದ್ದುಕೊಂಡಿತ್ತು. ಇದರ ನಡುವೆ ಬಾಂಗ್ಲಾದಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು 8 ಬಾರಿ ಮುಖಾಮುಖಿಯಾಗಿದೆ.

ಆದರೆ ಕಿವೀಸ್ ಪಡೆಗೆ ಒಮ್ಮೆಯೂ ಗೆಲುವು ಮಾತ್ರ ದಕ್ಕಿರಲಿಲ್ಲ. ಇದೀಗ 15 ವರ್ಷಗಳ ಬಳಿಕ ಲಾಕಿ ಫರ್ಗುಸನ್ ನಾಯಕತ್ವದ ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶ್ ತಂಡವನ್ನು ತವರಿನಲ್ಲೇ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಹದಿನೈದು ವರ್ಷಗಳ ಸುದೀರ್ಘ ಸೋಲಿನ ಸರಪಳಿಯನ್ನು ಕಳಚುವಲ್ಲಿ ನ್ಯೂಝಿಲೆಂಡ್ ತಂಡ ಯಶಸ್ವಿಯಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago