ಕ್ರೀಡಾ ಸುದ್ದಿ

15 ವರ್ಷಗಳ ಬಳಿಕ ಬಾಂಗ್ಲಾದೇಶ್ ವಿರುದ್ಧ ನ್ಯೂಝಿಲೆಂಡ್ ಗೆ ಐತಿಹಾಸಿಕ ಗೆಲುವು

ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಡೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕಿವೀಸ್ ಪಡೆ 15 ವರ್ಷಗಳ ಬಳಿಕ ಬಾಂಗ್ಲಾ ನೆಲದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಗೆಲುವಿನ ನಗೆ ಬೀರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಲಾಕಿ ಫರ್ಗುಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

Advertisement
Advertisement
Advertisement

ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಿನ್ ಅಲೆನ್ (12) ಹಾಗೂ ವಿಲ್ ಹಂಗ್ (0) ಮೊದಲ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದರು. ಇನ್ನು ಚಡ್ ಬೌವ್ಸ್ 14 ರನ್​ಗಳಿಸಿದರೆ, ಹೆನ್ರಿ ನಿಕೋಲ್ಸ್ 49 ರನ್ ಬಾರಿಸಿದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಬ್ಲಂಡೆಲ್ 66 ಎಸೆತಗಳಲ್ಲಿ 68 ರನ್ ಬಾರಿಸಿ ತಂಡಕ್ಕೆ ಆಸರೆಯಾದರು.

ಮತ್ತೊಂದೆಡೆ ಇಶ್ ಸೋಧಿ 35 ರನ್​ಗಳ ಕಾಣಿಕೆ ನೀಡಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 49.2 ಓವರ್​ಗಳಲ್ಲಿ 254 ರನ್​ಗಳಿಸಿ ನ್ಯೂಝಿಲೆಂಡ್ ತಂಡವು ಆಲೌಟ್ ಆಯಿತು.

255 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡದ ಪರ ಆರಂಭಿಕ ತಮೀಮ್ ಇಕ್ಬಾಲ್ 58 ಎಸೆತಗಳಲ್ಲಿ 44 ರನ್ ಬಾರಿಸಿದ್ದರು. ಆದರೆ ಉಳಿದ ಬ್ಯಾಟರ್​ಗಳನ್ನು ಬೇಗನೆ ಪೆವಿಲಿಯನ್​ಗೆ ಕಳುಹಿಸುವಲ್ಲಿ ಸ್ಪಿನ್ನರ್ ಇಶ್ ಸೋಧಿ ಯಶಸ್ವಿಯಾದರು.

ಇದಾಗ್ಯೂ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಹಮದುಲ್ಲಾ 76 ಎಸೆತಗಳಲ್ಲಿ 49 ರನ್ ಬಾರಿಸಿದರು. ಆದರೆ ಇಶ್ ಸೋಧಿ ಸ್ಪಿನ್ ಮೋಡಿಗೆ ಪೆವಿಲಿಯನ್ ಪರೇಡ್ ನಡೆಸಿದ ಬಾಂಗ್ಲಾ ಆಟಗಾರರು 41.1 ಓವರ್​ಗಳಲ್ಲಿ 168 ರನ್​ಗಳಿಗೆ ಆಲೌಟ್ ಆಯಿತು. ನ್ಯೂಝಿಲೆಂಡ್ ಪರ 10 ಓವರ್​ಗಳಲ್ಲಿ 39 ರನ್ ನೀಡಿ ಇಶ್ ಸೋಧಿ 6 ವಿಕೆಟ್ ಕಬಳಿಸಿ ಮಿಂಚಿದರು.

ಕಿವೀಸ್ ಪಡೆಗೆ ಐತಿಹಾಸಿಕ ಗೆಲುವು:

ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶದಲ್ಲಿ ಬಾಂಗ್ಲಾ ವಿರುದ್ಧ ಏಕದಿನ ಪಂದ್ಯ ಗೆದ್ದು ಬರೋಬ್ಬರಿ 15 ವರ್ಷಗಳೇ ಕಳೆದಿತ್ತು. ಅಂದರೆ 2008 ರಲ್ಲಿ ಕಿವೀಸ್ ಪಡೆ ಕೊನೆಯ ಬಾರಿ ಬಾಂಗ್ಲಾದೇಶ್​ನಲ್ಲಿ ಏಕದಿನ ಪಂದ್ಯ ಗೆದ್ದುಕೊಂಡಿತ್ತು. ಇದರ ನಡುವೆ ಬಾಂಗ್ಲಾದಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು 8 ಬಾರಿ ಮುಖಾಮುಖಿಯಾಗಿದೆ.

ಆದರೆ ಕಿವೀಸ್ ಪಡೆಗೆ ಒಮ್ಮೆಯೂ ಗೆಲುವು ಮಾತ್ರ ದಕ್ಕಿರಲಿಲ್ಲ. ಇದೀಗ 15 ವರ್ಷಗಳ ಬಳಿಕ ಲಾಕಿ ಫರ್ಗುಸನ್ ನಾಯಕತ್ವದ ನ್ಯೂಝಿಲೆಂಡ್ ತಂಡವು ಬಾಂಗ್ಲಾದೇಶ್ ತಂಡವನ್ನು ತವರಿನಲ್ಲೇ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಹದಿನೈದು ವರ್ಷಗಳ ಸುದೀರ್ಘ ಸೋಲಿನ ಸರಪಳಿಯನ್ನು ಕಳಚುವಲ್ಲಿ ನ್ಯೂಝಿಲೆಂಡ್ ತಂಡ ಯಶಸ್ವಿಯಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago