ಲೇಖನಗಳು

ಪುತ್ತೂರು ರೋಟರಿ ಎಲೈಟ್ ಇದರ ಆಶ್ರಯದಲ್ಲಿ ನಡೆದ “ಇಂಜಿನಿಯರ್ಸ್ ಡೇ”

engineersday2023 ಪುತ್ತೂರು; ಪುತ್ತೂರು ರೋಟರಿ ಎಲೈಟ್ ಇದರ ಆಶ್ರಯದಲ್ಲಿ ಇಂಜಿನಿಯರ್ಸ್ ಡೇ ದಿನವನ್ನು ಸುದಾನ ಸಭಾಂಗಣದಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬಂದಂತಹ ಜಿಲ್ಲಾ ರೋಟರಿ ಇದರ ವಲಯ ಐದರ ಲೀಡರ್ಶಿಪ್ ಡೆವಲಪ್ಮೆಂಟ್ ಇದರ ಕೋಆರ್ಡಿನೇಟರ್ ಆಗಿರುವ ರೊ. ಸುಧೀರ್ ಬಿ ಯವರು ಮಾತಾಡಿ ದೇಶ ಕಂಡ ಮೂರು ಮಹಾನ್ ವ್ಯಕ್ತಿಗಳಲ್ಲಿ ಓರ್ವರಾದ ಸರ್ ಎಂ ವಿಶ್ವೇಶ್ವರಯ್ಯ ರವರ ಜೀವನದ ಆದರ್ಶಗಳನ್ನು ಇಂದಿನ ಇಂಜಿನಿರುಗಳು ಪಾಲಿಸಬೇಕು ಅವರ ದೂರ ದೃಷ್ಟಿಯನ್ನು ತಮ್ಮ ಯೋಜನೆಯಲ್ಲಿ ಅಳವಡಿಸಿದಾಗ ವಿಶ್ವದಲ್ಲಿಯೇ ನಮ್ಮ ದೇಶ ಸಮಗ್ರತೆಯನ್ನು ಕಾಣಬಹುದು. ಯುವಜನರಲ್ಲಿ ನೈಪುಣ್ಯತೆಗೆ ಕೊರತೆ ಇಲ್ಲ ದುರದೃಷ್ಟ ವಸಾತ್ ಅದು ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಹೇಳಿದರು. ಅಧ್ಯಕ್ಷರು ರಜಾಕ್ ಕಬಕಕಾರ್ಸ್ ರವರು ಸ್ವಾಗತಿಸಿದರು. ಆಸ್ಕರ್ ಆನಂದ ರವರು ವರದಿ ವಾಚಿಸಿದರು. ವೃತ್ತಿಸೇವಾ ನಿರ್ದೇಶಕಿ ಹರಿಣಿ ಪುತ್ತೂರಾಯ ಸಂದರ್ಭೋಚಿತವಾಗಿ ಮಾತನಾಡಿದರು. ಈಶ್ವರ್ ಬೇಡೆಕರ್ ಪ್ರಾರ್ಥಿಸಿದರು. ಮೌನೇಶ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು .ಈ ಸಂದರ್ಭದಲ್ಲಿ ಕ್ಲಬ್ಬಿನ ಒಟ್ಟು 15 ಇಂಜಿನಿಯರ್ ಗಳನ್ನು ಗುರುತಿಸಿ ಗೌರವಿಸಲಾಯಿತು.

rotaryputturelite #rotaryintenational #RotariansInAction #rotaryclub

Advertisement
Advertisement
Advertisement

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago