
ಪುತ್ತೂರು: ಅಕ್ಟೋಬರ್ 15ರಿಂದ 24ರವರೆಗೆ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 24ರಂದು ದೇವಳದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಮತ್ತು ಉತ್ಸವ ಸಮಿತಿಯ ಸಂಚಾಲಕರು, ದೇವಸ್ಥಾನದ ವ್ಯವಸ್ಥಾಪಕರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.
ಆಮಂತ್ರಣ ಪತ್ರಿಕೆ ಡೌನ್ ಲೋಡ್ ಮಾಡಲು ಈ ಲಿಂಕ್ ಅನ್ನು ಬಳಸಿ