ದೇಶ

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ: ಕೆಎಸ್‌ಆರ್‌ಟಿಸಿಗೆ ಒಟ್ಟು 9 ವರ್ಗಗಳಲ್ಲಿ ಹಾಗೂ ಬಿಎಂಟಿಸಿಗೆ 4 ವರ್ಗಗಳಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

Advertisement
Advertisement
Advertisement

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ವತಿಯಿಂದ ನವದೆಹಲಿಯ ಪಿಹೆಚ್.ಡಿ ಚೇಂಬರ್ಸ್‌ನಲ್ಲಿ 17ನೇ ವಿಶ್ವ ಸಂವಹನ ಸಮ್ಮೇಳನ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಬಾಂಗ್ಲಾದೇಶದ ಮಾಹಿತಿ ಆಯುಕ್ತ ಗುಲಾಂ ರೆಹಮಾನ್, ಪಿಆರ್‌ಸಿಐ ಗೌರವ ಮುಖ್ಯಸ್ಥ ಎಂ.ಬಿ. ಜಯರಾಂ, ಎನ್‌ಎಫ್‌ಎಲ್ ನಿರ್ದೇಶಕ ಬಿ.ವಿ. ವಿಠ್ಠಲ್, ಸ್ವಿಜರ್ಲೆಂಡ್‌ನ ಮಾಧ್ಯಮ ಮತ್ತು ಪತ್ರಿಕೋದ್ಯಮ ಸಂಸ್ಥೆ ನಿರ್ದೇಶಕ ಪ್ರೊ. ಮ್ಯಾಥ್ಯು ಹಿಬರ್ಡ್‌ ಅವರು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕೆಎಸ್‌ಆರ್‌ಟಿಸಿ

ವರ್ಷದ ಅತ್ಯುತ್ತಮ ಗ್ರಾಹಕ ಸ್ನೇಹಿ ಸಂಸ್ಥೆ – ಡೈಮಂಡ್ ಪ್ರಶಸ್ತಿ, ಅತ್ಯುತ್ತಮ ವರ್ಷದ ಸೇವಾ ಉಪಕ್ರಮ – ಡೈಮಂಡ್ ಪ್ರಶಸ್ತಿ, ಸಾಂಸ್ಥಿಕ ಹಾಗೂ ವ್ಯಾವಹಾರಿಕ ಸಂಪರ್ಕ ಉಪಕ್ರಮ – ಡೈಮಂಡ್ ಪ್ರಶಸ್ತಿ, ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ – ಬೆಳ್ಳಿ ಪ್ರಶಸ್ತಿ, ವಿವಿಧತೆ ಹಾಗೂ ಸಮಾನತೆಯ ಉತ್ತಮ ಉಪಕ್ರಮ – ಬೆಳ್ಳಿ ಪ್ರಶಸ್ತಿ, ಅತ್ಯುತ್ತಮ ವರ್ಷದ ಉಪಕ್ರಮ ಉತ್ಪನ್ನ – ಬೆಳ್ಳಿ ಪ್ರಶಸ್ತಿ, ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ – ಕಂಚಿನ ಪ್ರಶಸ್ತಿ, ಸಾರ್ವಜನಿಕ ಸಂಪರ್ಕ ಅಧ್ಯಯನ – ಕಂಚಿನ ಪ್ರಶಸ್ತಿ, ಪ್ರಾದೇಶಿಕ ಆಂತರಿಕ ನಿಯತಕಾಲಿಕ ಮುದ್ರಣ – ಸಮಾಧಾನಕರ ಪ್ರಶಸ್ತಿ.

ಕೆಎಸ್‌ಆರ್‌ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಹಿಮವರ್ಧನ ನಾಯ್ಡು ಅಲೂರಿ, ವಿ.ಬಸವರಾಜು, ಎಸ್.ಲಕ್ಷ್ಮಣ್, ಎಸ್.ಪಿ. ನಾಗರಾಜ ಅವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ಬಿಎಂಟಿಸಿ

ಸಾಂಸ್ಥಿಕ ಕೈಪಿಡಿ – ಡೈಮಂಡ್ ಪ್ರಶಸ್ತಿ, ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ – ಚಿನ್ನದ ಪ್ರಶಸ್ತಿ, ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ – ಬೆಳ್ಳಿ ಪ್ರಶಸ್ತಿ, ವರ್ಷದ ಅತ್ಯುತ್ತಮ ಸೃಜನಶೀಲ ಜಾಹೀರಾತು – ಕಂಚಿನ ಪ್ರಶಸ್ತಿ. ಪಶ್ಚಿಮ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಶ್ರೀನಾಥ್ ಪ್ರಶಸ್ತಿ ಸ್ವೀಕರಿಸಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago