ಕ್ರೀಡಾ ಸುದ್ದಿ

ಏಶಿಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

ಬೀಜಿಂಗ್: 19ನೇ ಏಷ್ಯನ್‌ ಕ್ರೀಡಾಕೂಟ ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿದ್ದು, ಮೊದಲ ದಿನ ವಿವಿಧ ಕ್ರೀಡೆಗಳಲ್ಲಿ ಭಾರತಕ್ಕೆ 3 ಬೆಳ್ಳಿ ಹಾಗೂ 2 ಕಂಚಿನ ಪದಕಗಳು ಬಂದಿವೆ.

Advertisement
Advertisement
Advertisement

ಮಹಿಳೆಯರ ಶೂಟಿಂಗ್‌ ವಿಭಾಗದಲ್ಲಿ ಇಂದು (ಭಾನುವಾರ) ಭಾರತವು ಮೊದಲ ಪದಕದೊಂದಿಗೆ ಖಾತೆ ತೆರೆಯಿತು.

10 ಮೀ ಏರ್‌ ರೈಫಲ್‌ ಶೂಟಿಂಗ್‌:

10 ಮೀ ಏರ್‌ ರೈಫಲ್‌ ಶೂಟಿಂಗ್‌ನಲ್ಲಿ ಭಾರತದ ಮಹಿಳಾ ತಂಡವು ಬೆಳ್ಳಿ ಪದಕ ಜಯಿಸಿದೆ. ಮೆಹುಲಿ ಘೋಷ್, ರಮಿತಾ ಮತ್ತು ಆಶಿ ಚೌಕ್ಸೆ ಪದಕಕ್ಕೆ ಮುತ್ತಿಟ್ಟರು. ಒಟ್ಟು 1,886 ಅಂಕ ಗಳಿಸುವ ಮೂಲಕ ಚೀನಾದ ನಂತರ 2ನೇ ಸ್ಥಾನ ಗಳಿಸಿದ್ದಾರೆ.

ರೋಯಿಂಗ್: ಲೈಟ್‌ವೇಟ್ ಪುರುಷರ ಡಬಲ್ ಸ್ಕಲ್ಸ್‌ನಲ್ಲಿ ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ ಜೋಡಿ 6:28.18 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರು.

ರೋಯಿಂಗ್‌, ಪುರುಷರ ಜೋಡಿ: ಲೇಖ್ ರಾಮ್ ಮತ್ತು ಬಾಬು ಲಾಲ್ ಯಾದವ್ ಜೋಡಿಯು 6:50.41 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕಕ್ಕೆ ಮುತ್ತಿಟ್ಟರು. ಆ ಮೂಲಕ ಭಾರತಕ್ಕೆ ಮೂರನೇ ಪದಕ ತಂದುಕೊಟ್ಟರು.

ರೋಯಿಂಗ್‌: ರೋಯಿಂಗ್‌ನಲ್ಲಿ ಪದಕದ ಭರಾಟೆ ಮುಂದುವರಿಸಿದ ಭಾರತವು ಈ ಬಾರಿ ಪುರುಷರ ಎಂಟರ ಸ್ಪರ್ಧೆಯಲ್ಲಿ ಮತ್ತೊಂದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿತು.

ಶೂಟಿಂಗ್: ಮಹಿಳೆಯರ 10 ಮೀಟರ್‌ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಭಾರತದ ಯುವ ಶೂಟರ್‌ ರಮಿತಾ ಜಿಂದಾಲ್‌ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದಾರೆ. 19 ವಯಸ್ಸಿನ ರಮಿತಾ 230.1 ಅಂಕದೊಂದಿಗೆ ಮೂರನೇ ಸ್ಥಾನ ಗಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago