ಕ್ರೀಡಾ ಸುದ್ದಿ

ಆಸ್ಟ್ರೇಲಿಯಾಗೆ 400 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿದ ಟೀಮ್ ಇಂಡಿಯಾ

ಇಂದೋರ್‌: ಇಲ್ಲಿನ ಹೋಳ್ಕರ್‌ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ ನಷ್ಟಕ್ಕೆ 399 ರನ್‌ ಸಿಡಿಸಿದ್ದು, ಆಸ್ಟ್ರೇಲಿಯಾಗೆ 400 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿದೆ.

Advertisement
Advertisement
Advertisement

ಶ್ರೇಯರ್‌ ಅಯ್ಯರ್‌ ಹಾಗೂ ಶುಭಮನ್‌ ಗಿಲ್‌ ಶತಕದ ಜೊತೆಯಾಟ, ಸೂರ್ಯಕುಮಾರ್‌ ಯಾದವ್‌ ಹಾಗೂ ಕೆ.ಎಲ್‌ ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ 399‌ ರನ್‌ ಬಾರಿಸಿದೆ. ಸಿಕ್ಸರ್‌ ಬೌಂಡರಿ ಆಟದಲ್ಲಿ ಟೀಂ ಇಂಡಿಯಾ ಪರ 31 ಬೌಂಡರಿ, 18 ಸಿಕ್ಸರ್‌ಗಳು ದಾಖಲಾಗಿವೆ. ಅಲ್ಲದೇ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸಿಡಿಸಿದ ದಾಖಲೆಯ ರನ್‌ ಕೂಡ ಇದಾಗಿದೆ.

ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್‌ ಗಾಯಕ್ವಾಡ್‌ ಹಾಗೂ ಶುಭಮನ್‌ ಗಿಲ್‌ ಜೋಡಿ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲವಾಯಿತು. ಆರಂಭಿಕ ಋತುರಾಜ್‌ ಗಾಯಕ್ವಾಡ್‌ 12 ಎಸೆತಗಳಲ್ಲಿ 8 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಬಳಿಕ 2ನೇ ವಿಕೆಟ್‌ಗೆ ಜೊತೆಯಾದ ಶುಭಮನ್‌ ಗಿಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ಬರೋಬ್ಬರಿ 200 ರನ್‌ಗಳ ಜೊತೆಯಾಟ ನೀಡಿದರು. ಆಸೀಸ್‌ ಬೌಲರ್‌ಗಳನ್ನ ಹಿಗ್ಗಾಮುಗ್ಗ ಬೆಂಡೆತ್ತಿದ ಈ ಜೋಡಿ 164 ಎಸೆತಗಳಲ್ಲಿ 200 ರನ್‌ಗಳ ಜೊತೆಯಾಟ ನೀಡಿತು. ಶ್ರೇಯಸ್‌ ಅಯ್ಯರ್‌ 90 ಎಸೆತಗಳಲ್ಲಿ 105 ರನ್‌ (11 ಬೌಂಡರಿ, 3 ಸಿಕ್ಸರ್‌) ಬಾರಿಸಿದ್ರೆ. ಶುಭಮನ್‌ ಗಿಲ್‌ 97 ಎಸೆತಗಳಲ್ಲಿ 104 ರನ್‌ (6 ಬೌಂಡರಿ, 4 ಸಿಕ್ಸರ್‌) ಚಚ್ಚಿದರು.

ನಂತರ ಕ್ರೀಸ್‌ಗಿಳಿದ ಟೀಂ ಇಂಡಿಯಾ ಬ್ಯಾಟರ್ಸ್‌ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದರು. 136.84 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೆ.ಎಲ್‌ ರಾಹುಲ್‌ 38 ಎಸೆತಗಳಲ್ಲಿ 52 ರನ್‌ (3 ಬೌಂಡರಿ, 3 ಸಿಕ್ಸರ್‌) ಚಚ್ಚಿದರೆ, 172.22 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಇಶಾನ್‌ ಕಿಶನ್‌ 18 ಎಸೆತಗಳಲ್ಲಿ 31 ರನ್‌ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು.

ಸೂರ್ಯ ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ:

ಕೊನೆಯಲ್ಲಿ ಕಣಕ್ಕಿಳಿದ ಸೂರ್ಯಕುಮಾರ್‌ ಯಾದವ್‌ ಟಿ20 ಶೈಲಿಯಲ್ಲೇ ಬ್ಯಾಟಿಂಗ್‌ ಮಾಡುವ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದರು. ಮೊದಲ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್‌ ಮಾಡಿದ್ದ ಸೂರ್ಯ ಇಂದು 37 ಎಸೆತಗಳಲ್ಲಿ 72 ರನ್‌ (6 ಸಿಕ್ಸರ್‌, 6 ಬೌಂಡರಿ) ಬಾರಿಸುವ ಮೂಲಕ ಟೀಂ ಇಂಡಿಯಾ 400 ರನ್‌ಗಳ ಗುರಿ ನೀಡಲು ಸಾಧ್ಯವಾಯಿತು. ರವೀಂದ್ರ ಜಡೇಜಾ 9 ಎಸೆತಗಳಲ್ಲಿ 13 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

ಆಸೀಸ್‌ ಪರ ಕ್ಯಾಮರೂನ್‌ ಗ್ರೀನ್‌ 2 ವಿಕೆಟ್‌ ಕಿತ್ತರೆ, ಜೋಶ್‌ ಹ್ಯಾಜಲ್‌ವುಡ್‌, ಸೇನ್‌ ಅಬ್ಬಾಟ್‌, ಆಡಂ ಝಂಪಾ ತಲಾ ಒಂದೊಂದು ವಿಕೆಟ್‌ ಪಡೆದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago