ಕರಾವಳಿ

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ- ಸಚಿವ ಮಧು ಬಂಗಾರಪ್ಪ

ಮಂಗಳೂರು : ಶಾಲಾ ಮಕ್ಕಳ ಬ್ಯಾಗ್ ಹೊರೆಯನ್ನು ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Advertisement
Advertisement
Advertisement

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ದ. ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗ ಇರುವ ವ್ಯವಸ್ಥೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದೆ. ಕಡಿತ ಮಾಡಲು ಪ್ರಯತ್ನಿಸಲಾಗುತ್ತಿದೆ. ಈಗ ಇರುವ ಭಾರಕ್ಕಿಂತ ಅರ್ಧಕ್ಕೂ ಕಡಿಮೆ ಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು. ನನ್ನ ಬಯಕೆ ಆರನೇ ಒಂದು ಪಟ್ಟು ಭಾರ ಇರುವಂತೆ ಮಾಡಬೇಕೆಂಬುದು ಇತ್ತು. ಆದರೆ ಮೂರನೇ ಒಂದು ಪಟ್ಟು ಇರುವಂತೆ ಮಾಡಲಾಗುವುದು. ಬ್ಯಾಗ್ ಹೊರೆ ಕಡಿಮೆ ಮಾಡುವ ತೀರ್ಮಾನದಿಂದ ಶಿಕ್ಷಣದ ಗುಣಮಟ್ಟಕ್ಕೆ ತೊಂದರೆಯಾಗುವುದಿಲ್ಲ ಎಂದರು.

ಇನ್ನು ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧರಿಸಲಾಗಿದೆ. ಮೊದಲ ಬಾರಿಗೆ ನಡೆದ ಪರೀಕ್ಷೆಯಲ್ಲಿ ಫೇಲಾದ ಅಥವಾ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಬೇಕಾದ ಸಬ್ಜೆಕ್ಟ್​ನಲ್ಲಿ ಎರಡನೇ ಪರೀಕ್ಷೆ ತೆಗೆದುಕೊಳ್ಳಬಹುದು. ಅದರಲ್ಲಿಯೂ ತೃಪ್ತರಾಗದಿದ್ದರೆ ಮೂರನೇ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಮೂರರಲ್ಲಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೋ ಅದನ್ನು ಪರಿಗಣಿಸಲಾಗುವುದು. ಇದರಿಂದ ಅವರಿಗೆ ಅದೇ ವರ್ಷದಲ್ಲಿ ಮುಂದಿನ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಪ್ರಕ್ರಿಯೆಯಿಂದ ಆ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದ ಅಡ್ಮಿಷನ್ ಪಡೆದು ಶಾಲೆಗೆ ಹೋಗಲು ಒಂದು ತಿಂಗಳು ವಿಳಂಬವಾಗಬಹುದು. ಅದನ್ನು ಆಯಾ ಶಿಕ್ಷಣ ಸಂಸ್ಥೆಗಳು ಬ್ರಿಡ್ಜ್ ಕೋರ್ಸ್​ನಿಂದ ಅದನ್ನು ಸರಿದೂಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago