ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ : ಓವರ್‌ ಕಡಿತಗೊಳಿಸಲು ನಿರ್ಧಾರ

By: Ommnews

Date:

Share post:

ಇಂದೋರ್‌: ಇಲ್ಲಿನ ಹೋಳ್ಕರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ. ಇದರಿಂದ ಓವರ್‌ ಕಡಿತಗೊಳಿಸಿ ಪಂದ್ಯ ಮುಂದುವರಿಸಲು ನಿರ್ಧರಿಸಲಾಗಿದೆ.

Advertisement
Advertisement
Advertisement

ಮೊದಲು ಬ್ಯಾಟಿಂಗ್‌ ಮಾಡಿರುವ ಟೀಂ ಇಂಡಿಯಾ 50 ಓವರ್‌ಗಳಲ್ಲಿ 399 ರನ್‌ ಗಳಿಸಿದ್ದು, ಎದುರಾಳಿ ಆಸ್ಟ್ರೇಲಿಯಾಕ್ಕೆ 400 ರನ್‌ಗಳ ಗುರಿ ನೀಡಿದೆ.

ಚೇಸಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ 2ನೇ ಓವರ್‌ನಲ್ಲೇ ಕೇವಲ 9 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆದ್ರೆ ಡೇವಿಡ್‌ ವಾರ್ನರ್‌ ಹಾಗೂ ಮಾರ್ನಸ್‌ ಲಾಬುಶೇನ್‌ ತಂಡಕ್ಕೆ ಚೇತರಿಕೆ ನೀಡಲು ಪ್ರಯತ್ನಿಸಿದ್ದರು. ಆಸೀಸ್‌ 9 ಓವರ್‌ಗಳಲ್ಲಿ 56 ರನ್‌ ಗಳಿಸಿ ಆಡುತ್ತಿದ್ದಂತೆ ಮಳೆ ಅಡ್ಡಿಯುಂಟು ಮಾಡಿತು.‌

ಸುಮಾರು 20 ನಿಮಿಷಗಳಿಂದ ಮಳೆ ಅಡ್ಡಿಯುಂಟು ಮಾಡಿದೆ. ಹಾಗಾಗಿ ಓವರ್‌ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ. ಟೀಂ ಇಂಡಿಯಾ ಬ್ಯಾಟಿಂಗ್‌ ವೇಳೆಯು ಮಳೆ ಅಡಚಣೆಯುಂಟುಮಾಡಿತ್ತು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section