ರಾಜ್ಯ

ಗಣೇಶ ಹಬ್ಬದ ಪ್ರಯುಕ್ತ ಒಂದೂವರೆ ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ

ಹಾವೇರಿ: ಗಣೇಶ ಚತುರ್ಥಿ ಮುಗಿದು ಇದೀಗ ತಾಳವಾದ್ಯಗಳೊಂದಿಗೆ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಕಾರ್ಯಕ್ರಮಗಳು ಅದ್ಧೂರಿಯಾಗಿ ಅಲ್ಲಲ್ಲಿ ನಡೆಯುತ್ತಿವೆ. ಆದ್ರೆ ರಾಣೇಬೆನ್ನೂರಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ಒಂದೂವರೆ ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ ಮಾಡಲಾಗಿದೆ.

Advertisement
Advertisement
Advertisement

ಶತಮಾನಗಳ ಇತಿಹಾಸ ಸಾರುವ ಜೊತೆಗೆ ರಾಮಮಂದಿರದ ಇತಿಹಾಸ ತಿಳಿಸುವ ಮಾಹಿತಿಗಳನ್ನೂ ಇಲ್ಲಿ ಚಿತ್ರಿಸಲಾಗಿದೆ. ಈ ಸೌಂದರ್ಯವನ್ನ ಕಣ್ತುಂಬಿಕೊಳ್ಳಲು ಭಕ್ತರು ಮುಗಿಬೀಳುತ್ತಿದ್ದಾರೆ.

.ವಂದೇ ಮಾತರಂ ಸೇವಾ ಸಂಸ್ಥೆಯು ಕಳೆದ 15 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತಾ ಬಂದಿದೆ. ಆದ್ರೆ ಈ ಬಾರಿ ಹಬ್ಬವನ್ನು ಇನ್ನಷ್ಟು ವಿಶೇಷವಾಗಿಸಲು ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ ನೇತೃತ್ವದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ಈ ಬಾರಿ ಗಣೇಶ ಪ್ರತಿಷ್ಠಾಪನೆ ಜೊತೆಗೆ ಭವ್ಯ ರಾಮಮಂದಿರವನ್ನೂ ನಿರ್ಮಾಣ ಮಾಡಲಾಗಿದೆ.

ರಾಮಮಂದಿರದ ವಿಶೇಷತೆ ಏನು?

ಸಾವಿರಾರು ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮಾದರಿಯಲ್ಲೇ ಇಲ್ಲಿನ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಜೊತೆಗೆ ರಾಮ ಜನ್ಮಭೂಮಿಗಾಗಿ ನಡೆದ ಹೋರಾಟಗಳು ಹಾಗೂ ಅದರ ಹಿನ್ನೆಲೆಯನ್ನು ಬರಹಗಳಲ್ಲಿ ಅಳವಡಿಸಲಾಗಿದೆ. ಇದರೊಂದಿಗೆ ಮಂದಿರಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದೆ.

ಅಷ್ಟೇ ಅಲ್ಲದೇ ಇತಿಹಾಸ ಸಾರುವ ಅನೇಕ ಕಬ್ಬಿಣ ಹಾಗೂ ಫೈಬರ್‌ನಿಂದ ಸಿದ್ಧಪಡಿಸಲಾದ ಕಲಾಕೃತಿಗಳನ್ನೂ ಈ ಮಂದಿರದಲ್ಲಿ ನಿರ್ಮಿಸಲಾಗಿದೆ. ಶ್ರೀರಾಮನ ಮೂರ್ತಿಯನ್ನೂ ಇಲ್ಲಿ ಇಡಲಾಗಿದ್ದು, ಭಕ್ತರನ್ನು ಆಕರ್ಷಿಸುವಂತೆ ಮಾಡಲಾಗಿದೆ. ಭಕ್ತರು ಸಂತಸದಿಂದಲೇ ಮಂದಿರಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

ಹಾವೇರಿ ಅಷ್ಟೇ ಅಲ್ಲದೆ ಶಿವಮೊಗ್ಗ, ದಾವಣಗೆರೆ, ಧಾರವಾಡ ಜಿಲ್ಲೆಗಳಿಂದಲೂ ಅನೇಕರು ರಾಮಮಂದಿರ ನೋಡಲು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago