ಕರಾವಳಿ

ಮಂಗಳೂರು: ಇಂದು ಅಣಕು ಪ್ರದರ್ಶನ – ಸನ್ನದ್ದರಾಗಿರಲು ಎಡಿಸಿ ನಿರ್ದೇಶನ

ಮಂಗಳೂರು, ಸೆ 26 : ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಂದಾಯ ಇಲಾಖೆ, ಎನ್ ಡಿ ಆರ್‌ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದ ಬಳಿ ಸೆ. 27ರ ಬುಧವಾರ ಬೆಳಗ್ಗೆ 10 ಗಂಟೆಗೆ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾದರೆ ಅದರಿಂದ ರಕ್ಷಿಸಿಕೊಳ್ಳುವ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ತಿಳಿಸಿದರು.

Advertisement
Advertisement
Advertisement

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೆ. 26ರ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದ ಹತ್ತಿರ ಹರಿಯುವ ನೇತ್ರಾವತಿ ನದಿಯಲ್ಲಿ ಒಮ್ಮಿಂದೊಮ್ಮೆಲೆ ಪ್ರವಾಹ ಎದುರಾದರೆ ಅದರಿಂದ ಜನ-ಜಾನುವಾರುಗಳನ್ನು ರಕ್ಷಿಸುವ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ, ಇದಕ್ಕೆ ಕಂದಾಯ, ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ಕೈಗೊಂಡಿರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಈ ಅಣಕು ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ತಿಳಿಯಲಿದೆ. ಆದ್ದರಿಂದ ಸಂಬಂಧಿಸಿದ ಎಲ್ಲಾ ಇಲಾಖೆಗಳು ಭಾಗವಹಿಸಿ, ಪ್ರವಾಹದ ಸಂದರ್ಭದಲ್ಲಿ ಅವರ ಸನ್ನದ್ದತೆಯ ಬಗ್ಗೆ ಕ್ರಮವಹಿಸಬೇಕು ಎಂದವರು ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಣಕು ಪ್ರದರ್ಶನವನ್ನು ಸಾರ್ವಜನಿಕರು ಹಾಗೂ ವಿದ್ಯಾ ಶಾಲಾ ವಿದ್ಯಾರ್ಥಿಗಳಿಗೆ ವೀಕ್ಷಿಸಲು ಅನುಮತಿ ಇರುವುದಾಗಿಯೂ ಅವರು ತಿಳಿಸಿದರು.

ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಜಯಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago