ಕ್ರೀಡಾ ಸುದ್ದಿ

25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ ತಂಡ

ಹ್ಯಾಂಗ್‌ಝೂ: ಏಷ್ಯನ್‌ ಗೇಮ್ಸ್‌ ನಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. 25 ಮೀ. ಸ್ಪರ್ಧೆಯಲ್ಲಿ ಮಹಿಳೆಯರ ಪಿಸ್ತೂಲ್ ತಂಡ ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ.

Advertisement
Advertisement
Advertisement

ಬುಧವಾರ(ಸೆ.27 ರಂದು) ನಡೆದ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್, ಎಸ್ ಇಶಾ ಸಿಂಗ್ ಮತ್ತು ರಿದಮ್ ಸಾಂಗ್ವಾನ್ ಅವರು ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಆ ಮೂಲಕ ಭಾರತದ ಏಷ್ಯನ್‌ ಗೇಮ್ಸ್‌ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ.

ಭಾರತ ಒಟ್ಟು 1759 ಅಂಕಗಳನ್ನು ಗಳಿಸುವ ಮೂಲಕ ಪ್ರಬಲ ಸ್ಪರ್ಧಿ ಚೀನಾಕ್ಕೆ ಆಘಾತವನ್ನೀಡಿದೆ. ಬೆಳ್ಳಪಡೆದುಕೊಂಡ ಚೀನಾ ಒಟ್ಟು 1756 ಅಂಕಗಳನ್ನು ಗಳಿಸಿತು. ಇನ್ನು ರಿಪ್ಲಬಿಕ್‌ ಆಫ್‌ ಕೊರಿಯಾ 1742 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಏಷನ್ಸ್‌ ಗೇಮ್ಸ್‌ ನಲ್ಲಿ ಭಾರತ ಇದುವರೆಗೆ 16 ಪದಕಗಳನ್ನು ಗಳಿಸಿದ್ದು, ಇದರಲ್ಲಿ 4 ಚಿನ್ನ, 5 ಬೆಳ್ಳಿ ಹಾಗೂ 7 ಕಂಚಿನ ಪದಕಗಳು ಸೇರಿವೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago