ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸೆಪ್ಟೆಂಬರ್ 29 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ಕರೆಯಲಾಗಿದೆ. ಪ್ರಾಧಿಕಾರದ ಅಧ್ಯಕ್ಷ ಎಸ್ಕೆ ಹಲ್ದಾರ್ ನೇತೃತ್ವದಲ್ಲಿ ದೆಹಲಿಯ ಎಂಟಿಎನ್ಎಲ್ ಕಟ್ಟಡದಲ್ಲಿರುವ ಕಚೇರಿಯಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಅಧಿಕಾರಿಗಳು ಭಾಗಿಯಾಗಲಿದ್ದು ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶದ ಪರಿಶೀಲನೆ ಮಾಡಲಾಗುತ್ತದೆ. ಸುದೀರ್ಘ ಚರ್ಚೆ ಬಳಿಕ ಸಿಡಬ್ಲ್ಯುಆರ್ಸಿ 18 ದಿನ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದ್ದು ಇದಕ್ಕೆ ಕರ್ನಾಟಕ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿವೆ.
ಕರ್ನಾಟಕದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 53% ಮಳೆಯ ಕೊರತೆಯಾಗಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಇದರಲ್ಲಿ, 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿ ಬರುತ್ತವೆ. ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದೆ.
ಪರಿಸ್ಥಿತಿ ಅವಲೋಕಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ 18 ದಿನ ನಿತ್ಯ 3,000 ಕ್ಯೂಸೆಕ್ ನೀರು ಬಿಡಲು ಶಿಫಾರಸು ಮಾಡಿದೆ. ಇದಕ್ಕೆ 2 ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಈ ಬಗ್ಗೆ ಪರಿಶೀಲಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈಗ ಸಭೆ ಕರೆದಿದೆ. ಈ ನಡುವೆ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…