ರಾಜ್ಯ

ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡ್ತಿದ್ದಾರೆ ಕರ್ನಾಟಕದ ವೃದ್ಧ: ಕೋಟ್ಯಂತರ ರೂ. ಮೌಲ್ಯದ ಷೇರುಗಳ ಒಡೆಯ

ಬೆಂಗಳೂರು, ಸೆ. 27: ಕರ್ನಾಟಕದ ಹಿರಿಯ ವ್ಯಕ್ತಿಯೊಬ್ಬರು ಮೂರು ವಿಭಿನ್ನ ಕಂಪನಿಗಳಲ್ಲಿ 10.3 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು, ಆ ಕುರಿತು ಅವರು ಮಾತನಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟೊಂದು ಮೌಲ್ಯದ ಷೇರುಗಳನ್ನು ಹೊಂದಿದ್ದರೂ ಅತಿ ಸರಳವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಬಗ್ಗೆ ಉಲ್ಲೇಖಿಸಲಾಗಿದೆ. ವಿಡಿಯೋದಲ್ಲಿ ಹೇಳಿರುವ ಪ್ರಕಾರ ಅವರು, 10.3 ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ. ಅವುಗಳ ಲಾಭಾಂಶದಿಂದಲೇ ವಾರ್ಷಿಕವಾಗಿ 6 ​​ಲಕ್ಷ ರೂ. ಗಳಿಸುತ್ತಿದ್ದಾರೆ. ಈ ಬಗ್ಗೆ ರಾಜೀವ್ ಮೆಹ್ತಾ ಎಂಬ ವ್ಯಕ್ತಿ ಸಾಮಾಜಿಕ ಮಾಧ್ಯಮ ತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

Advertisement
Advertisement
Advertisement

ನನ್ನ ಬಳಿ 27,855 ಎಲ್​ ಆ್ಯಂಡ್ ಟಿ ಷೇರುಗಳು, 2,475 ಅಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಮತ್ತು 4,000 ಕರ್ನಾಟಕ ಬ್ಯಾಂಕ್ ಷೇರುಗಳಿವೆ. ನಾನು ಪ್ರತಿ ವರ್ಷ ಈ ಷೇರುಗಳಿಂದ 6,15,000 ರೂಪಾಯಿ ಲಾಭಾಂಶವನ್ನು ಗಳಿಸುತ್ತೇನೆ ಎಂದು ಹಿರಿಯ ವ್ಯಕ್ತಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಪ್ರಸ್ತುತ ವಹಿವಾಟಿನ ಬೆಲೆಗಳ ಪ್ರಕಾರ, ಅವರು 8.24 ಕೋಟಿ ರೂ. ಮೌಲ್ಯದ ಎಲ್ & ಟಿ ಷೇರುಗಳನ್ನು, 2.04 ಕೋಟಿ ರೂ. ಮೌಲ್ಯದ ಅಲ್ಟ್ರಾಟೆಕ್ ಷೇರುಗಳನ್ನು ಮತ್ತು 9.80 ಲಕ್ಷ ರೂ. ಮೌಲ್ಯದ ಕರ್ನಾಟಕ ಬ್ಯಾಂಕ್ ಷೇರುಗಳನ್ನು ಹೊಂದಿದ್ದಾರೆ ಎಂದು ರಾಜೀವ್ ಮೆಹ್ತಾ ‘ಎಕ್ಸ್​’ ಪೋಸ್ಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಈ ಪೋಸ್ಟ್‌ಗೆ ಹಲವರು ಕಾಮೆಂಟ್ ಮಾಡಿ ಸರಳ ಜೀವನ ನಡೆಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago