ಚಲನಚಿತ್ರ

ನಟ ಶಿವರಾಜ್ ಕುಮಾರ್ ಮುಂದಾಳತ್ವದಲ್ಲಿ ನಾಳೆ ಕಾವೇರಿ ಹೋರಾಟ

ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಚಿತ್ರೋದ್ಯಮ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿಯುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿನ್ನೆ ಹೇಳಿಕೆ ನೀಡಿತ್ತು. ಆದರೆ, ಈ ಹೋರಾಟದ ನೇತೃತ್ವವನ್ನು ವಹಿಸುವವರು ಯಾರು ಎನ್ನುವ ಪ್ರಶ್ನೆ ಕೂಡ ಮೂಡಿತ್ತು.

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಗುರುರಾಜ್‌ ಕಲ್ಯಾಣ ಮಂಟಪದ ಬಳಿ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ.

ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ.

ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.

ಫಿಲ್ಮ್ ಚೇಂಬರ್ ಅಂಗ ಸಂಸ್ಥೆಗಳಾದ, ನಿರ್ಮಾಪಕರ ಸಂಘ, ಕಲಾವಿದರ ಸಂಘ, ನಿರ್ದೇಶಕರ ಸಂಘದಿಂದ, ಒಕ್ಕೂಟದಿಂದಲೂ ಕರ್ನಾಟಕ ಬೆಂಬಲಿಸಲಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago