ರಾಜ್ಯ

ಅಂಧರ ವಿಶ್ವಕಪ್ – ಭಾರತ ತಂಡದಲ್ಲಿರುವ ಕರ್ನಾಟಕದ ಆಟಗಾರರನ್ನು ಅಭಿನಂದಿಸಿದ ಸಿಎಂ, ರಾಜ್ಯಪಾಲರು

ಬೆಂಗಳೂರು: ಐಬಿಎಸ್‌ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.

Advertisement
Advertisement
Advertisement

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡಲ್ಲಿರುವ ಕರ್ನಾಟಕದ ಮೂವರು ಆಟಗಾರರನ್ನು ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಮೂವರು ಆಟಗಾರರನ್ನು ಅಭಿನಂದಿಸಿದರು.

ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಭಾರತದ ಅಂಧರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ರಾಜ್ಯಪಾಲರು, ಈ ಗೌರವ ಹೆಚ್ಚಿಸುವಲ್ಲಿ ಕರ್ನಾಟಕದ ಆಟಗಾರರು ಪಾಲುದಾರರಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಅವರಿಗೆ ತಲಾ 51,000 ರೂ. ಮತ್ತು ಪುರುಷರ ತಂಡದ ಪ್ರಕಾಶ್ ಜೆ., ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಆಟಗಾರರಿಗೆ ತಲಾ 41,000 ರೂ. ನಗದು ಪ್ರೋತ್ಸಾಹವನ್ನು ನೀಡಲಾಗುವುದು ಎಂದು ರಾಜ್ಯಪಾಲರು ಘೋಷಿಸಿದರು.

ಈ ಸಂದರ್ಭದಲ್ಲಿ ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago