ಚಲನಚಿತ್ರ

‘ಕಪ್ಪೆ ರಾಗ’ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿಗೆ ಪ್ರತಿಷ್ಠಿತ ಪ್ರಶಸ್ತಿ

ಸಿನಿಮಾ ವಿಚಾರಗಳಲ್ಲಿ ಮಾತ್ರವಲ್ಲ ಡಾಕ್ಯುಮೆಂಟರಿ ನಿರ್ಮಾಣದಲ್ಲೂ ಹಲವು ಪ್ರಯೋಗಗಳು ನಡೆಯುತ್ತಿರುತ್ತವೆ. ಆ ಸಾಲಿನಲ್ಲಿ ‘ಕಪ್ಪೆ ರಾಗ’ ಕೂಡ ಒಂದು. ಇದು ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಫಿಲಂ ಎಂಬ ಹೆಗ್ಗಳಿಕೆ ಇದಕ್ಕೆ ಸಲ್ಲಿಕೆ ಆಗುತ್ತದೆ. ಈ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ದೊರೆತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.

Advertisement
Advertisement
Advertisement

ಈ ಬಗ್ಗೆ ಸಿಎಂ ಆಫ್ ಕರ್ನಾಟಕ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ. ‘ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು. ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್​ನಂತಹ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ’ ಎಂದು ಬರೆಯಲಾಗಿದೆ.

‘ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತು ಅವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ. ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಪ್ರಶಾಂತ್ ಅವರು ಮಳೆ ಕಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಒಂದು ಅಪರೂಪದ ಕಪ್ಪೆಯ ಬಗ್ಗೆ ತಿಳಿಯಿತು. ಕಪ್ಪೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿದ ಡಾ. ಗಿರೀಶ್ ಜನ್ನೆ ಈ ಕಪ್ಪೆಯ ವಿಶೇಷತೆ ಬಗ್ಗೆ ತಿಳಿಸಿದರು. ಆಗ ಹುಟ್ಟಿದ್ದೇ ಕಪ್ಪೆ ರಾಗ. ಹೀಗಾಗಿ ಮ್ಯೂಸಿಕ್ ಮೂಲಕ ಈ ವಿಚಾರವನ್ನು ಹೇಳಲು ಪ್ರಶಾಂತ್ ನಿರ್ಧರಿಸಿದರು. ಗೌತಮ್ ಸಿನಿಮಾ ನಿರ್ಮಾಣದಲ್ಲಿ ಸಹಾಯ ಮಾಡಿದ್ದಾರೆ.

ಮಾನ್ಸೂನ್​ನಲ್ಲಿ ಈ ಸಿನಿಮಾನ ಶೂಟ್ ಮಾಡೋದು ಒಂದು ಚಾಲೆಂಜ್ ಆದರೆ, ಈ ಕಪ್ಪೆಯನ್ನು ಗುರುತಿಸೋದು ಮತ್ತೊಂದು ಸವಾಲು. ಈ ಎಲ್ಲಾ ಚಾಲೆಂಜ್​ನ ಸ್ವೀಕರಿಸಿ ಅವರು ಈ ಮ್ಯೂಸಿಕ್ ಡಾಕ್ಯುಮೆಂಟರಿ ಮಾಡಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago