ತಂತ್ರಜ್ಞಾನ

ಹೊಸ ಬಣ್ಣ, ಕಡಿಮೆ ಬೆಲೆ: ಭಾರತದಲ್ಲಿ ವಿಶೇಷವಾಗಿ ಬಿಡುಗಡೆ ಆಯಿತು ಮೋಟೋ E13

ಮೋಟೋರೊಲಾ ಕಂಪನಿ ಈ ವರ್ಷದ ಆರಂಭದಲ್ಲಿ ತನ್ನ ಬಜೆಟ್ ಸ್ಮಾರ್ಟ್‌ಫೋನ್ ಮೋಟೋ E13 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತು. ಅತ್ಯಂತ ಕಡಿಮೆ ಬೆಲೆ ಹಾಗೂ ಆಕರ್ಷಕ ಫೀಚರ್​ಗಳಿಂದ ಕೂಡಿರುವ ಈ ಫೋನಿಗೆ ಉತ್ತಮ ಪ್ರತಿಕ್ರಿಯೆ ಕೂಡ ಕೇಳಿ ಬಂದಿತ್ತು. ಆರಂಭದಲ್ಲಿ ಈ ಫೋನ್ 2GB + 64GB ಮತ್ತು 4GB + 64GB ಯ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಯಿತು. ನಂತರ ಆಗಸ್ಟ್‌ನಲ್ಲಿ 8GB + 128GB ರೂಪಾಂತರವನ್ನು ಪರಿಚಯಿಸಿತು. ಮೋಟೋರೊಲಾ ಇದೀಗ ಭಾರತದಲ್ಲಿ ಮೋಟೋ E13 ಅನ್ನು ಹೊಸ ಬಣ್ಣದ ರೂಪಾಂತರದಲ್ಲಿ ಬಿಡುಗಡೆ ಮಾಡಿದೆ.

ಮೋಟೋ E13 ಹೊಸ ಬಣ್ಣ ಯಾವುದು?

ಮೋಟೋ E13 ಈಗ ಹೊಸ ‘ಸ್ಕೈ ಬ್ಲೂ’ ಬಣ್ಣದ ರೂಪಾಂತರದಲ್ಲಿ ಅನಾವರಣಗೊಂಡಿದೆ. ಇದು 8GB + 128GB ಮಾದರಿಗೆ ಮಾತ್ರ ಲಭ್ಯವಿದೆ. ಈ ಸ್ಮಾರ್ಟ್​ಫೋನ್ ಈಗಾಗಲೇ ಕೆನೆ ವೈಟ್, ಅರೋರಾ ಗ್ರೀನ್ ಮತ್ತು ಕಾಸ್ಮಿಕ್ ಬ್ಲ್ಯಾಕ್ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಮಾರಾಟ ಕಾಣುತ್ತಿದೆ. ಮೋಟೋರೊಲಾ X ನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಘೋಷಿಸಿದೆ. ಜೊತೆಗೆ ವಿಶೇಷ ಆಫರ್ ಕೂಡ ಪ್ರಕಟಿಸಿದೆ.

ಮೋಟೋ E13 ಸ್ಮಾರ್ಟ್​ಫೋನ್ 6,749 ರೂ. ಗೆ ವಿಶೇಷ ಬೆಲೆಯೊಂದಿಗೆ ಲಭ್ಯವಿರುತ್ತದೆ. ಇದರ ಮೂಲ ಬೆಲೆ 8,999 ರೂ. ಆಗಿದೆ. ಈ ರಿಯಾಯಿತಿಯು ಬ್ಯಾಂಕ್ ಕೊಡುಗೆಗಳನ್ನು ಒಳಗೊಂಡಿರುತ್ತದೆ. ಮೊಟೊರೊಲಾ ವೆಬ್‌ಸೈಟ್ ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಖರೀದಿಸಬಹುದು. ಅಕ್ಟೋಬರ್ 8 ರಂದು ಪ್ರಾರಂಭವಾಗಲಿರುವ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ 2023 ರಲ್ಲೂ ಈ ಫೋನ್ ಖರೀದಿಸಬಹುದು.

ಮೋಟೋ E13 ಫೀಚರ್ಸ್:

ಡಿಸ್‌ಪ್ಲೇ: ಮೋಟೋ E13 ಸ್ಮಾರ್ಟ್​ಫೋನ್ 6.5-ಇಂಚಿನ IPS LCD ಡಿಸ್‌ಪ್ಲೇ ಜೊತೆಗೆ 20:9 ಅನುಪಾತವನ್ನು ಹೊಂದಿದೆ.

ಪ್ರೊಸೆಸರ್: ಈ ಫೋನ್‌ ಯುನಿಸಾಕ್ T606 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ.

RAM ಮತ್ತು ಸಂಗ್ರಹಣೆ: ಇದು 2GB + 64GB, 4GB + 64GB, ಮತ್ತು 8GB + 128GB ಯ ಮೂರು ಶೇಖರಣಾ ರೂಪಾಂತರಗಳಲ್ಲಿ ಬರುತ್ತದೆ.

ಕ್ಯಾಮೆರಾಗಳು: ಈ ಸ್ಮಾರ್ಟ್​ಫೋನ್ 13MP ಪ್ರಾಥಮಿಕ ಕ್ಯಾಮೆರಾ ಮತ್ತು 5MP ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ: ಮೋಟೋ E13 10W ಚಾರ್ಜಿಂಗ್ ವೇಗದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

ಸಾಫ್ಟ್‌ವೇರ್: ಈ ಫೋನ್ ಆಂಡ್ರಾಯ್ಡ್ 13 (Go Edition) ಮೂಲಕ ರನ್ ಆಗುತ್ತದೆ.

ಇತರೆ ವೈಶಿಷ್ಟ್ಯಗಳು: IP52 ರೇಟಿಂಗ್ (ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ), 3.5mm ಹೆಡ್‌ಫೋನ್ ಜ್ಯಾಕ್, USB ಟೈಪ್-ಸಿ ಪೋರ್ಟ್, ಡಾಲ್ಬಿ ಅಟ್ಮಾಸ್ ಮತ್ತು ಬ್ಲೂಟೂತ್ 5.0.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago