ಅಹಮದಾಬಾದ್: ಭಾರತದಲ್ಲಿ ಆರಂಭವಾಗುವುದು ವಿಶ್ವಕಪ್ ಕ್ರಿಕೆಟ್ ಅಲ್ಲ ಅದು ವಿಶ್ವ ಭಯೋತ್ಪಾದನಾ ಕಪ್ಎಂದು ಸಿಖ್ ಫಾರ್ ಜಸ್ಟಿಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆ ಹಿನ್ನೆಲೆಯಲ್ಲಿ ಆತನ ವಿರುದ್ಧ ಗುಜರಾತಿನ ಅಹಮದಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವಕಪ್ ಕ್ರಿಕೆಟ್ ಗುರಿಯಾಗಿಸಿಕೊಂಡು ಪನ್ನುನ್ ಆಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ. ಅಕ್ಟೋಬರ್ 5 ರಿಂದ ಭಾರತದಲ್ಲಿ ವಿಶ್ವಕಪ್ ಕ್ರಿಕೆಟ್ ಆರಂಭವಾಗಲಿದೆ. ಆದರೆ ಅಕ್ಟೋಬರ್ 5 ರಿಂದ ತನ್ನ ಸಂಸ್ಥೆಯು ವಿಶ್ವ ಭಯೋತ್ಪಾದಕ ಕಪ್ ಅನ್ನು ಪ್ರಾರಂಭಿಸಲಿದೆ ಎಂದು ಬೆದರಿಕೆ ಹಾಕಿದ್ದಾನೆ.
ಅಷ್ಟೇ ಅಲ್ಲದೇ ಆಡಿಯೋದಲ್ಲಿ ನಿಜ್ಜರ್ ಹತ್ಯೆಗೆ ಪ್ರತೀಕಾರವಾಗಿ ಅಹಮದಾಬಾದ್ ಸ್ಟೇಡಿಯಂ ಮೇಲೆ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾನೆ. ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಹಲವು ಜನರ ಮೊಬೈಲ್ಗಳಿಗೆ ಪನ್ನುನ್ ಹೆಸರಿನಲ್ಲಿ ವಿದೇಶಿ ಸಂಖ್ಯೆಯಿಂದ ಆಡಿಯೋ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗ ಎಫ್ಐಆರ್ ದಾಖಲಿಸಲಾಗಿದೆ.
ಸಿಖ್ಖರು ಮತ್ತು ದೇಶದ ಇತರ ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪನ್ನುನ್ ಪ್ರಯತ್ನಿಸುತ್ತಿದ್ದಾನೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…