ಕರಾವಳಿ

ವಿಟ್ಲ :ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

ವಿಟ್ಲ: ಬೈಕ್ ಸೇತುವೆಗೆ ಢಿಕ್ಕಿಯಾಗಿ ಸವಾರ 40 ಅಡಿ ಆಳದ ನದಿಗೆ ಬಿದ್ದಿದ್ದು, ಸ್ಥಳೀಯ ಯುವಕರು ರಕ್ಷಿಸಿದ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.

Advertisement
Advertisement
Advertisement

ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕಪ್ರವೀಣ ಹರ್ಷವರ್ಧನ ಭಟ್(55) ಅವರು ಕಾರ್ಯನಿಮಿತ್ತ ಶನಿವಾರ ಬೆಳಗ್ಗೆ 4 ಗಂಟೆಗೆ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದು ಸವಾರ ಹರ್ಷವರ್ಧನ 40 ಅಡಿ ಆಳದ ನದಿಗೆ ಬಿದ್ದಿದ್ದಾರೆ.

ಈ ಅಪಘಾತವನ್ನು ಸ್ಥಳೀಯರು ನೋಡಿ ಹುಡುಕಾಡಲು ಆರಂಭಿಸಿದ್ದರು. ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಜೋರಾಗಿ ಕೂಗಾಡುತ್ತಿರುವ ಶಬ್ದ ಕೇಳಿತು. ತತ್ ಕ್ಷಣ ನದಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ಬದುಕಿಸಿದ್ದಾರೆ.

ಬಳಿಕ ಗಾಯಾಳುವನ್ನು ಉಪಚರಿಸಿದ ಮುಸಲ್ಮಾನ ಬಾಂಧವ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago