ಕ್ರೀಡಾ ಸುದ್ದಿ

ಏಶಿಯನ್ ಗೇಮ್ಸ್ : ಟೆನ್ನಿಸ್‌ ಮಿಶ್ರ ಡಬಲ್ಸ್‌ನಲ್ಲಿ ಭಾರತಕ್ಕೆ ಚಿನ್ನ

ಬೀಜಿಂಗ್: ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ನ ಟೆನ್ನಿಸ್‌ ಮಿಶ್ರ ಡಬಲ್ಸ್‌ನಲ್ಲಿ ಭಾರತದ ಟೆನ್ನಿಸ್‌ ಜೋಡಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

Advertisement
Advertisement
Advertisement

ರೋಹನ್-ರುತುಜಾ ಜೋಡಿಯು ಪಂದ್ಯದ ಆರಂಭಿಕ ಸೆಟ್‌ನಲ್ಲಿ ಹೋರಾಟ ನಡೆಸಿತು. ಚೀನಾದ ತೈಪೆಯ ಎನ್-ಶುವೊ ಲಿಯಾಂಗ್ ಮತ್ತು ತ್ಸುಂಗ್-ಹಾವೊ ಹುವಾಂಗ್ ವಿರುದ್ಧ 6-2 ರಿಂದ ಮೊದಲ ಸೆಟ್ ಅನ್ನು ಕಳೆದುಕೊಂಡಿತು. ಭಾರತದ ಜೋಡಿ ಅದ್ಭುತ ಪುನರಾಗಮನ ಮಾಡಿದರು. ನಂತರ ತಮ್ಮ ಎದುರಾಳಿಗಳನ್ನು 3-6 ಮತ್ತು 4-10 ರಿಂದ ನೇರ ಎರಡು ಸೆಟ್‌ಗಳಲ್ಲಿ ಸೋಲಿಸಲು ಆಟದ ಮೇಲೆ ಪ್ರಾಬಲ್ಯ ಸಾಧಿಸಿದರು.

ಇದಕ್ಕೂ ಮೊದಲು ಬೋಪಣ್ಣ-ಭೋಸಲೆ ಜೋಡಿಯು ಚೈನೀಸ್ ತೈಪೆಯ ಯು-ಹ್ಸಿಯು ಹ್ಸು ಮತ್ತು ಹಾವೊ-ಚಿಂಗ್ ಚಾಂಗ್ ವಿರುದ್ಧ ಶುಕ್ರವಾರ 6-1, 3-6, 10-4 ಅಂಕಗಳೊಂದಿಗೆ ಗೆಲುವು ದಾಖಲಿಸಿ ಪದಕ ಖಚಿತಪಡಿಸಿಕೊಂಡಿತ್ತು.

ಬೋಪಣ್ಣ-ಭೋಸಲೆ ಜೋಡಿಯು ಚೈನೀಸ್ ತೈಪೆಯ ಯು-ಹ್ಸಿಯು ಹ್ಸು ಮತ್ತು ಹಾವೊ-ಚಿಂಗ್ ಚಾಂಗ್ ವಿರುದ್ಧ 6-1 ರಿಂದ ಮೊದಲ ಸೆಟ್ ಅನ್ನು ಗೆದ್ದುಕೊಂಡಿತ್ತು. ಆದಾಗ್ಯೂ, ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಎರಡನೇ ಸೆಟ್‌ನಲ್ಲಿ ನಿಯಂತ್ರಣ ಕಳೆದುಕೊಂಡಿತು. ಆದರೆ ಅವರು ಟೈಬ್ರೇಕರ್‌ನಲ್ಲಿ 10-4 ರಿಂದ ಮೇಲುಗೈ ಸಾಧಿಸಿ ಫೈನಲ್ ಪಂದ್ಯಕ್ಕೆ ಲಗ್ಗೆಯಿಟ್ಟರು.

19ನೇ ಏಷ್ಯನ್ ಗೇಮ್ಸ್ ಪದಕ ಪಟ್ಟಿಯಲ್ಲಿ ಭಾರತ ತಂಡ ಒಟ್ಟು 34 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇದರಲ್ಲಿ 9 ಚಿನ್ನ, 13 ಬೆಳ್ಳಿ ಮತ್ತು 13 ಕಂಚಿನ ಪದಕಗಳು ಸೇರಿವೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago