ರಾಷ್ಟ್ರ

ಮಧ್ಯಪ್ರದೇಶದ ಚುನಾವಣೆ ಗಾಂಧಿ ಮತ್ತು ಗೋಡ್ಸೆ ಸಿದ್ಧಾಂತಗಳ ನಡುವಿನ ಹೋರಾಟ: ರಾಹುಲ್‌ ಗಾಂಧಿ

ಭೋಪಾಲ್‌: ಮುಂಬರುವ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆ ಗೋಡ್ಸೆಯ ಆರ್‌ಎಸ್‌ಎಸ್, ಬಿಜೆಪಿ ಸಿದ್ಧಾಂತ ಮತ್ತು ಗಾಂಧಿಯ ಕಾಂಗ್ರೆಸ್‌ ಸಿದ್ಧಾಂತಗಳ ನಡುವಿನ ಹೋರಾಟ ಎಂದು ಸಂಸದ ರಾಹುಲ್ ಗಾಂಧಿ ಹೇಳಿದರು.

Advertisement
Advertisement
Advertisement

ಮಧ್ಯಪ್ರದೇಶದ ಶಾಜಾಪುರದಲ್ಲಿ ಜನಾಕ್ರೋಶ ರ‍್ಯಾಲಿಯನ್ನುದ್ದೇಶಿ ಮಾತನಾಡಿದ ಅವರು, ಈ ಚುನಾವಣೆ ದ್ವೇಷದ ವಿರುದ್ಧ ಪ್ರೀತಿ ಮತ್ತು ಸಹೋದರತ್ವ ಬೆಸೆಯುವ ಚುನಾವಣೆ ಎಂದು ಹೇಳಿದರು.

ಬಿಜೆಪಿ ನಾಯಕರು ಎಲ್ಲಿಗೆ ಹೋದರೂ ದ್ವೇಷವನ್ನೇ ಹರಡುತ್ತಾರೆ. ಆದ್ದರಿಂದ ಮಧ್ಯಪ್ರದೇಶದ ರೈತರು ಮತ್ತು ಯುವಕರು ಅವರನ್ನು ದ್ವೇಷಿಸಲು ಶುರು ಮಾಡಿದ್ದಾರೆ. ಜನರ ನಡುವೆ ಹಂಚಿದ್ದ ದ್ವೇಷವನ್ನು ಅವರು ಮರಳಿ ಪಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದಲ್ಲಿ ಹಲವಾರು ರೈತರನ್ನು ಭೇಟಿಯಾದೆ, ನಾವು ಮಧ್ಯಪ್ರದೇಶದಲ್ಲಿ 370 ಕಿಮೀ ಪಾದಯಾತ್ರೆ ಮಾಡಿ ರಾಜ್ಯದ ರೈತರು, ಮಹಿಳೆಯರು ಮತ್ತು ಯುವಜನರನ್ನ ಭೇಟಿ ಮಾಡಿದೆವು. ಅಲ್ಲಿ ನಮ್ಮೊಂದಿಗೆ ಅವರು ಕೆಲವು ವಿಚಾರಗಳನ್ನ ಹಂಚಿಕೊಂಡರು. ಮಧ್ಯಪ್ರದೇಶದಲ್ಲಿ ಬಿಜೆಪಿ ಮಾಡಿರುವ ಭ್ರಷ್ಟಾಚಾರ ದೇಶದ ಯಾವ ರಾಜ್ಯದಲ್ಲೂ ನಡೆದಿಲ್ಲ ಎಂದು ಹೇಳಿಕೊಂಡಿರುವುದಾಗಿ ತಿಳಿಸಿದರು.

ಅಷ್ಟೇ ಅಲ್ಲದೇ ರಾಜ್ಯದಲ್ಲಿ ಕಳೆದ 18 ವರ್ಷಗಳಲ್ಲಿ 18 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಅರ್ಥ ರಾಜ್ಯದಲ್ಲಿ ಪ್ರತಿದಿನ ಮೂವರು ರೈತರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಮಧ್ಯಪ್ರದೇಶದ ರಾಜ್ಯ ಸರ್ಕಾರ ರೈತರ ಬೆಳೆಗೆ ಸರಿಯಾದ ಬೆಲೆ ನೀಡುತ್ತಿಲ್ಲ. ಹಾಗಾಗಿ ನಾವು ಅಧಿಕಾರಕ್ಕೆ ಬಂದರೆ ಏನು ಭರವಸೆ ನೀಡಿದ್ದೇವೆಯೋ ಅದನ್ನು ಪೂರೈಸುತ್ತೇವೆ. ಈಗಾಗಲೇ ಛತ್ತಿಸ್‌ಗಢದಲ್ಲೂ ನಾವು ನೀಡಿದ್ದ ಭರವಸೆಯನ್ನ ಪೂರೈಸಿದ್ದೇವೆ ಎಂದು ಅವರು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago