ಕರಾವಳಿ

ಇಂಡಿಯಾ ಪೋಸ್ಟ್ ಆಫೀಸ್ ಶಾಖಾ ಅಂಚೆ ಕಚೇರಿಗಳು ಇನ್ನು ಮುಂದೆ ಹೈಟೆಕ್‌!

ಮಂಗಳೂರು, ಅ. 4 : ಎಲ್ಲ ಶಾಖಾ ಅಂಚೆ ಕಚೇರಿಗಳಲ್ಲಿ ಉನ್ನತ ಮಟ್ಟದ ಸೇವೆ ಒದಗಿಸುವ ಉದ್ದೇಶದಿಂದ ಹೈಟೆಕ್‌ ಸೌಲಭ್ಯವನ್ನು ಪರಿಚಯಿಸಲಾಗಿದೆ. ಅ. 3ರಿಂದ ದೇಶದ ಸುಮಾರು 1,29,854 ಶಾಖಾ ಅಂಚೆ ಕಚೇರಿಗಳು ಈ ರೀತಿ ಉನ್ನತೀಕರಣಗೊಂಡಿವೆ.

Advertisement
Advertisement
Advertisement

ಶಾಖಾ ಅಂಚೆ ಕಚೇರಿಗಳಲ್ಲಿ ಇದುವರೆಗೆ ಬಳಕೆಯಲ್ಲಿ ಇದ್ದ “ಹ್ಯಾಂಡ್‌ ಹೆಲ್ಡ್‌ ಡಿವೈಸ್‌’ ಬದಲಿಗೆ “ಸಿಮ್‌ ಆಧಾರಿತ ಆಂಡ್ರಾಯ್ಡ ಮೊಬೈಲ್‌’ ಮುಖಾಂತರ ವ್ಯವಹರಿಸುವ ತಂತ್ರಜ್ಞಾನಕ್ಕೆ ಬದಲಾಯಿಸಲಾಗಿದೆ.

ಗ್ರಾಹಕರಿಗೆ ತೊಂದರೆಯಾಗದಂತೆ ಅ. 1 ಮತ್ತು 2ರಂದು ಹಳೆಯ ತಂತ್ರಾಂಶವನ್ನು ಸಂಪೂರ್ಣ ಬದಲಾಯಿಸಲಾಗಿದೆ.

ಗ್ರಾಹಕರಿಗೆ ಉನ್ನತ ಮಟ್ಟದ ಸೇವೆಯನ್ನು ಕೊಡುವ ಉದ್ದೇಶದಿಂದಾಗಿ ಹಳೆಯ ತಂತ್ರಜ್ಞಾನದಲ್ಲಿದ್ದ ತೊಂದರೆಗಳನ್ನು ನಿವಾರಿಸಿ ಹೊಸ “ಸಿಮ್‌ ಆಧಾರಿತ ಆಂಡ್ರಾಯ್ಡ ಮೊಬೈಲ್‌’ ಸೇವೆಯನ್ನು ಪರಿಚಯಿಸಲಾಗಿದೆ. ಅಂಚೆ ಇಲಾಖೆಯು ಗ್ರಾಹಕರಿಗೆ ದಕ್ಷತೆ, ಪ್ರಾಮಾಣಿಕತೆ ಹಾಗೂ ತ್ವರಿತ ಗತಿಯ ಸೇವೆಯನ್ನು ಕೊಡಲು ಇದರಿಂದ ಸಾಧ್ಯವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಗ್ರಾಹಕರಿಗೆ ಸಂದೇಶ

ಮಂಗಳೂರು ವಿಭಾಗದ ಎಲ್ಲ 95, ಪುತ್ತೂರು ವಿಭಾಗದ 321 ಮತ್ತು ಉಡುಪಿ ವಿಭಾಗದ ಎಲ್ಲ 200 ಶಾಖಾ ಅಂಚೆ ಕಚೇರಿಗಳಿಗೆ ಹೊಸ “ಆಂಡ್ರಾಯ್ಡ ಮೊಬೈಲ್‌’ಗಳನ್ನು ವಿತರಿಸಿ ಬದಲಾವಣೆಯ ಬಗ್ಗೆ ಸಿಬಂದಿ ಅವರಿಗೆ ಬೇಕಾಗುವ ತರಬೇತಿ ಕೊಡಲಾಗಿದೆ. ಈಗ ಗ್ರಾಹಕರು ಮಾಡುವ ವ್ಯವಹಾರದ ಮಾಹಿತಿಯು ಗ್ರಾಹಕರ ಮೊಬೈಲ್‌ಗೆ ಸಂದೇಶ ರವಾನೆಯಾಗುತ್ತದೆ. ಗ್ರಾಹಕರ ಸೇವೆಯನ್ನು ತ್ವರಿತವಾಗಿ ನಿಭಾಯಿಸಲು ಇದು ಸಹಕಾರಿಯಾಗಿದೆ. ಬಹುಮುಖ್ಯವಾಗಿ, ಹಿಂದಿನ ಹ್ಯಾಂಡ್‌ ಹೆಲ್ಡ್‌ ಡಿವೈಸ್‌ನಲ್ಲಿ ಕಂಡುಬರುತ್ತಿದ್ದ ನೆಟ್‌ವರ್ಕ್‌ ಸಮಸ್ಯೆ ಹೊಸ ಬದಲಾವಣೆಯೊಂದಿಗೆ ನಿವಾರಣೆಯಾಗುವ ಆಶಯದಿಂದ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ.

ಶಾಖಾ ಕಚೇರಿಗಳಲ್ಲಿ ಹ್ಯಾಂಡ್‌ ಹೆಲ್ಡ್‌ ಡಿವೈಸ್‌ ಮೂಲಕ ದರ್ಪಣ್‌ 1.0 ಎಂಬ ವ್ಯವಸ್ಥೆ ಜಾರಿಯಲ್ಲಿತ್ತು. ಈಗ ದರ್ಪಣ್‌ 2.0 ಎಂಬ ಹೊಸ ವ್ಯವಸ್ಥೆ ಬಂದಿದೆ. ಅದರ ಆಧಾರದಲ್ಲಿ ಮೊಬೈಲ್‌ ಕೂಡ ನೀಡಲಾಗಿದೆ. ಕೆಲವು ಕಡೆ ನೆಟ್‌ವರ್ಕ್‌ ಸಮಸ್ಯೆ ಇರುವಲ್ಲಿಗೆ ಇದರಿಂದ ಪರಿಹಾರ ಸಿಗಲಿದೆ. ಜತೆಗೆ ಗ್ರಾಹಕರಿಗೆ ತ್ವರಿತ ಸೇವೆ ನೀಡಲು ಸಾಧ್ಯವಾಗಲಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago