ಬಾಲಿವುಡ್ ಖ್ಯಾತ ನಟ ರಣಬೀರ್ ಕಪೂರ್ ಗೆ ಇಡಿ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ನಿಜಕ್ಕೂ ಬಾಲಿವುಡ್ ಗೆ ಇದೊಂದು ಶಾಕಿಂಗ್ ನ್ಯೂಸ್ ಕೂಡ ಆಗಿದೆ.
ಉದ್ಯಮಿ ಸೌರಬ್ ಚಂದ್ರಶೇಖರ್ ಅವರ ದುಬಾರಿ ಮದುವೆ ಪಾರ್ಟಿಯಲ್ಲಿ ಹಲವು ಸಿಲೆಬ್ರಿಟಿಗಳು ಭಾಗಿಯಾಗಿದ್ದರು. ಈ ಮದುವೆಯ ಪಾರ್ಟಿಯಲ್ಲಿ ಭಾಗಿಯಾಗುವುದಕ್ಕಾಗಿಯೇ ಹಣ ಪಡೆದಿದ್ದರು. ಇವರಿಗೆಲ್ಲ ನೀಡಿದ ಹಣವು ಮಹದೇವ ಬೆಟ್ಟಿಂಗ್ ಆಪ್ ನಿಂದ ಬಂದಿದ್ದಾಗಿದೆ. ಈ ಆಪ್ ನಲ್ಲಿ ಹವಾಲ ಹಣ ಹೂಡಿಕೆ ಮಾಡಲಾಗಿದೆ ಎನ್ನುವ ಆರೋಪವೂ ಕೇಳಿ ಬಂದಿದೆ. ಹಾಗಾಗಿ ಹಣ ಪಡೆದವರಿಗೆ ನೋಟಿಸ್ ನೀಡಿ ವಿಚಾರಣೆ ಕರೆಯಲಾಗುತ್ತಿದೆ.
ಬಾಲಿವುಡ್ ನ ಅನೇಕ ನಟ ನಟಿಯರು ಈ ಆಪ್ ನಲ್ಲಿ ಪರೋಕ್ಷವಾಗಿ ಹಣ ಹೂಡಿದ್ದಾರೆ ಎನ್ನುವ ಮಾಹಿತಿಯೂ ಇದೆ. ಕೆಲವರು ಇದರ ಜಾಹೀರಾತಿನಲ್ಲೂ ಭಾಗಿಯಾಗಿದ್ದಾರೆ. ಅಲ್ಲದೇ, ಆಪ್ ಪ್ರಚಾರದಲ್ಲೂ ತೊಡಗಿಕೊಂಡಿದ್ದಾರೆ. ಈ ಆಪ್ ಜೊತೆ ಗುರುತಿಸಿಕೊಂಡ ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ರಣಬೀರ್ ಕಪೂರ್ ಜೊತೆ ಇನ್ನೂ ಒಂಬತ್ತು ಜನ ಸೆಲೆಬ್ರೆಟಿಗಳಿಗೂ ನೋಟಿಸ್ ನೀಡಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…