ದಿನಾಂಕ : 4.10.2023
ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ ಸಂಪೂರ್ಣ ದುರ್ಲಕ್ಷ್ಯ, ಮತಾಂಧರ ಓಲೈಕೆ ಮಾಡುವ ಪ್ರಯತ್ನವು ಕಾಣುತ್ತಿದೆ.
ಶಿವಮೊಗ್ಗವು ಅತ್ಯಂತ ಕೋಮು ಸೂಕ್ಷ್ಮ ಪ್ರದೇಶವೆಂದು ತಿಳಿದಿದ್ದೂ ‘ಇದು ಸಣ್ಣ ಘಟನೆ’ ಎಂದು ಉನ್ನತ ಸ್ಥಾನದಲ್ಲಿರುವ ಗೃಹ ಸಚಿವರು ಹೇಳುತ್ತಾರೆ, ಪೊಲೀಸರ ಮೇಲೆ ಕಲ್ಲು ಹೊಡೆಯುವುದು ಸಣ್ಣ ಘಟನೆಯೇ ? ಎಂಬ ಪ್ರಶ್ನೆ ನಿರ್ಮಾಣವಾಗುತ್ತದೆ. ಒಟ್ಟಾರೆ ಸಮಾಜಕ್ಕೆ ಕಂಟಕ ತರುವ ಅತ್ಯಂತ ಗಂಭೀರ ಘಟನೆಗಳು ನಡೆದ ಮೇಲೂ ನಾಯಕರ ನಿರ್ಲಕ್ಷ್ಯತನದ ಹೇಳಿಕೆಗಳು ರಾಜ್ಯದ ರಕ್ಷಣೆಗೆ ಕುತ್ತು ತರುವಂತಿದೆ. ಹಾಗಾಗಿ ಆರೋಪಿಗಳನ್ನು ಬಂದಿಸುವುದಕ್ಕೆ ಮಾತ್ರ ಸೀಮಿತ ಮಾಡದೆ ಕೂಡಲೇ ಸರಕಾರವು ಈ ಘಟನೆಯನ್ನು ಎಸ್ಐಟಿ ತನಿಖೆಗೆ ಒಳಪಡಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ ಮತಾಂಧರ ಮನೆಗಳನ್ನು ಮುಟ್ಟುಗೋಲು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸುತ್ತದೆ.
ತಮ್ಮ ವಿಶ್ವಾಸಿ, ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ (ಸಂಪರ್ಕ : 7204082609)
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…