ಇಂಫಾಲ, ಅ. 5: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಜಮಾಯಿಸಿದ ಮೈತೆಯಿ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…