ಅಂತರಾಷ್ಟ್ರೀಯ

ಉಕ್ರೇನ್‌ ದಿನಸಿ ಅಂಗಡಿ ಮೇಲೆ ರಷ್ಯಾ ರಾಕೆಟ್‌ ದಾಳಿಗೆ 49 ಮಂದಿ ಬಲಿ

ಕೀವ್‌/ಮಾಸ್ಕೋ: 2022ರ ಫೆಬ್ರವರಿ 24ರಂದು ಆರಂಭವಾದ ರಷ್ಯಾ-ಉಕ್ರೇನ್‌ ಯುದ್ಧ ಸದ್ದು ಮಾಡುತ್ತಲೇ ಇದೆ. ಯುದ್ಧ ಆರಂಭವಾಗಿ ವರ್ಷ ಕಳೆದರೂ, ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡರೂ, ವಿಶ್ವದ ಅನೇಕ ರಾಷ್ಟ್ರಗಳು ಶಾಂತಿ ಕಾಪಾಡುವಂತೆ ಸಲಹೆ ನೀಡಿದರೂ ಡೋಂಟ್‌ಕೇರ್‌ ಎನ್ನುವಂತೆ ರಷ್ಯಾ ಉಕ್ರೇನ್‌ ಮೇಲಿನ ದಾಳಿಯನ್ನ ಮುಂದುವರಿಸಿದೆ.

Advertisement
Advertisement
Advertisement

ಗುರುವಾರವೂ ಸಹ ರಷ್ಯಾ ಸೇನೆಯು ಉಕ್ರೇನ್‌ನ ಖಾರ್ಕೀವ್‌ ಪೂರ್ವ ಪ್ರದೇಶದ ದಿನಸಿ ಅಂಗಡಿ ಹಾಗೂ ಕೆಫೆಯೊಂದರ ಮೇಲೆ ದಾಳಿ ನಡೆಸಿದ್ದು, ಸುಮಾರು 49 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಗ್ರೋಜಾ ಗ್ರಾಮದಲ್ಲಿ ಮಧ್ಯಾಹ್ನ 1:15ರ ವೇಳೆಗೆ ದಾಳಿ ನಡೆದಿರುವುದಾಗಿ ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ತಿಳಿಸಿದ್ದಾರೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸ್ಥಳಕ್ಕೆ ಧಾವಿಸಿದ್ದಾರೆ.

ಕಳೆದ ವರ್ಷ ಉಕ್ರೇನ್‌ ವಶಪಡಿಸಿಕೊಂಡಿದ್ದ ಕಾರ್ಕೀವ್‌ ಪ್ರದೇಶಗಳನ್ನು ಮರಳಿ ಪಡೆದುಕೊಳ್ಳಲು ಉಕ್ರೇನ್‌ ಕಸರತ್ತು ನಡೆಸುತ್ತಿದೆ. ಆದ್ರೆ ಇದಕ್ಕೆ ಆಸ್ಪದ ನೀಡದ ರಷ್ಯಾ ಉಕ್ರೇನಿನ ಮೇಲೆ ಭೀಕರ ದಾಳಿ ನಡೆಸುತ್ತಲೇ ಇದೆ, ಅಲ್ಲಿನ ಮೂಲ ಸೌಕರ್ಯಗಳನ್ನು ನಾಶಪಡಿಸುತ್ತಿದೆ.

ರಷ್ಯಾ ಸೇನೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಗುರುವಾರ ಉಕ್ರೇನಿನ 49 ಮಂದಿ ಸಾವನ್ನಪ್ಪಿದ್ದಾರೆ. ಇದು ರಷ್ಯಾದ ಉದ್ದೇಶಿದ ಭಯೋತ್ಪಾದಕ ದಾಳಿ ಎಂದು ಉಕ್ರೇನಿಯನ್‌ ಪ್ರಾಸಿಕ್ಯೂಟರ್ ಜನರಲ್ ಆರೋಪಿಸಿದ್ದಾರೆ. ಘಟನೆ ನಂತರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago