ಕೀವ್/ಮಾಸ್ಕೋ: 2022ರ ಫೆಬ್ರವರಿ 24ರಂದು ಆರಂಭವಾದ ರಷ್ಯಾ-ಉಕ್ರೇನ್ ಯುದ್ಧ ಸದ್ದು ಮಾಡುತ್ತಲೇ ಇದೆ. ಯುದ್ಧ ಆರಂಭವಾಗಿ ವರ್ಷ ಕಳೆದರೂ, ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡರೂ, ವಿಶ್ವದ ಅನೇಕ ರಾಷ್ಟ್ರಗಳು ಶಾಂತಿ ಕಾಪಾಡುವಂತೆ ಸಲಹೆ ನೀಡಿದರೂ ಡೋಂಟ್ಕೇರ್ ಎನ್ನುವಂತೆ ರಷ್ಯಾ ಉಕ್ರೇನ್ ಮೇಲಿನ ದಾಳಿಯನ್ನ ಮುಂದುವರಿಸಿದೆ.
ಗುರುವಾರವೂ ಸಹ ರಷ್ಯಾ ಸೇನೆಯು ಉಕ್ರೇನ್ನ ಖಾರ್ಕೀವ್ ಪೂರ್ವ ಪ್ರದೇಶದ ದಿನಸಿ ಅಂಗಡಿ ಹಾಗೂ ಕೆಫೆಯೊಂದರ ಮೇಲೆ ದಾಳಿ ನಡೆಸಿದ್ದು, ಸುಮಾರು 49 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಗ್ರೋಜಾ ಗ್ರಾಮದಲ್ಲಿ ಮಧ್ಯಾಹ್ನ 1:15ರ ವೇಳೆಗೆ ದಾಳಿ ನಡೆದಿರುವುದಾಗಿ ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ತಿಳಿಸಿದ್ದಾರೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸ್ಥಳಕ್ಕೆ ಧಾವಿಸಿದ್ದಾರೆ.
ಕಳೆದ ವರ್ಷ ಉಕ್ರೇನ್ ವಶಪಡಿಸಿಕೊಂಡಿದ್ದ ಕಾರ್ಕೀವ್ ಪ್ರದೇಶಗಳನ್ನು ಮರಳಿ ಪಡೆದುಕೊಳ್ಳಲು ಉಕ್ರೇನ್ ಕಸರತ್ತು ನಡೆಸುತ್ತಿದೆ. ಆದ್ರೆ ಇದಕ್ಕೆ ಆಸ್ಪದ ನೀಡದ ರಷ್ಯಾ ಉಕ್ರೇನಿನ ಮೇಲೆ ಭೀಕರ ದಾಳಿ ನಡೆಸುತ್ತಲೇ ಇದೆ, ಅಲ್ಲಿನ ಮೂಲ ಸೌಕರ್ಯಗಳನ್ನು ನಾಶಪಡಿಸುತ್ತಿದೆ.
ರಷ್ಯಾ ಸೇನೆ ನಡೆಸಿದ ರಾಕೆಟ್ ದಾಳಿಯಲ್ಲಿ ಗುರುವಾರ ಉಕ್ರೇನಿನ 49 ಮಂದಿ ಸಾವನ್ನಪ್ಪಿದ್ದಾರೆ. ಇದು ರಷ್ಯಾದ ಉದ್ದೇಶಿದ ಭಯೋತ್ಪಾದಕ ದಾಳಿ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಆರೋಪಿಸಿದ್ದಾರೆ. ಘಟನೆ ನಂತರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…