ಸುದ್ದಿಗಳು

ಉಪ್ಪಿನಂಗಡಿ,ಸೆ. 23ರ ಹಲ್ಲೆ ಪ್ರಕರಣದ ವಿಡಿಯೋ ವೈರಲ್

ಪುತ್ತೂರು : ಕಟ್ಟಡ ವಿಚಾರವೊಂದಕ್ಕೆ ಹದಿನೈದು ದಿನಗಳ ಹಿಂದೆ ಹಿಂದೂ ಪರ ಸಂಘಟನೆಗೆ ಸೇರಿದ ಯುವಕರು ಆ ಕಟ್ಟಡಕ್ಕೆ ನುಗ್ಗಿ ಅಲ್ಲಿದ್ದ ಹಿಂದೂಗಳಿಗೆ ಹಲ್ಲೆ ನಡೆಸಿದ ಹಾಗೂ ಹಲ್ಲೆಗೊಳಗಾದವರನ್ನು ಸ್ಥಳೀಯ ಮುಸ್ಲಿಂ ಯುವಕರು ರಕ್ಷಿಸಲು ಮುಂದಾದ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ. ಈ ಘಟನೆ ಸೆ.23 ರಂದು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.ಇದೀಗ ಈ ಕುರಿತು ವೀಡಿಯೋ ವೈರಲ್ ಆಗುತ್ತಿದೆ.

ಪ್ರಕರಣದ ವಿವರ : ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಾಂಗಟು ಪಾಸ್ವಾನ್(35) ಎಂಬಾತ ಸೆ.24 ರಂದು ದೂರು ನೀಡಿದ್ದು, ತಾನು 34 ನೆಕ್ಕಿಲಾಡಿಯ ಜಗಜ್ಜೀವನ್ ರೈ ಅವರ ಮನೆಯಲ್ಲಿ ಕೂಲಿ ಕೆಲಸ ಮಡಿಕೊಂಡಿದ್ದು,ಸೆ.23 ರಂದು ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನನ್ನ ಧಣಿಯವರಿಗೆ ಸೇರಿದ ಹಳೆಯ ಕಟ್ಟಡದ ದುರಸ್ತಿ ಮಾಡಿತ್ತಿದ್ದ ಸಂದರ್ಭ ಮಧ್ಯಾಹ್ನ 3-10 ರ ಸುಮಾರಿಗೆ ಆರೋಪಿಗಳಾದ ಉಪ್ಪಿನಂಗಡಿ ನಿವಾಸಿ ಸುದರ್ಶನ ಹಾಗೂ 10-15 ಮಂದಿಯ ತಂಡ ಅಕ್ರಮ ಕೂಟ ಸೇರಿಕೊಂಡು ನನ್ನ ಧಣಿಯವರ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ನನ್ನನ್ನು ಉದ್ದೇಶಿಸಿ ಇಲ್ಲಿಂದ ಎಲ್ಲರೂ ಹೋಗಿ ಎಂದು ಹೇಳಿದ್ದಲ್ಲದೆ,ಕಾಲಿನ ಚಪ್ಪಲಿಯಿಂದ ನನಗೆ ಹಲ್ಲೆ ನಡೆಸಿದ್ದಾರೆ.

ಬಿಡಿಸಲು ಬಂದ ನನ್ನ ಧಣಿ ಜಗಜ್ಜೀವನ್ ರೈ ಯವರಿಗೆ 10-13 ಮಂದಿ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ.ನನ್ನ ಧಣಿಯವರು ಹಾಗೂ ಆರೋಪಿ ಸುದರ್ಶನ್‌ಗೂ ಜಾಗದ ಕಟ್ಟಡದ ವಿಚಾರದಲ್ಲಿ ತಕರಾರು ಇದ್ದು, ಧಣಿಯವರು ಕಟ್ಟಡದ ದುರಸ್ತಿ ಕೆಲಸವನ್ನು ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಈ ಕೃತ್ಯವೆಸಗಿದ್ದಾರೆ’

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago