ದೇಶ

ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡ ಜಿಯೋಮಾರ್ಟ್

ಮುಂಬೈ: ರಿಲಯನ್ಸ್ ರಿಟೇಲ್‌ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್‌ ಪ್ಲೇಸ್‌ಗಳಲ್ಲಿ ಒಂದಾಗಿದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ. ಇದರ ಜೊತೆಗೆ, ತನ್ನ ಹಬ್ಬದ ಕ್ಯಾಂಪೇನ್ ಅನ್ನು ಜಿಯೋ ಉತ್ಸವ, ಸೆಲೆಬ್ರೇಶನ್‌ ಆಫ್‌ ಇಂಡಿಯಾ ಎಂದು ಮರುನಾಮಕರಣ ಮಾಡಿದ್ದು, 2023 ಅಕ್ಟೋಬರ್ 8 ರಿಂದ ಲೈವ್ ಆಗಲಿದೆ.

Advertisement
Advertisement
Advertisement

ಜಿಯೋಮಾರ್ಟ್ ಸಿಇಒ ಸಂದೀಪ್ ವರಗಂಟಿ, ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ಅತ್ಯಂತ ಉತ್ತಮವಾಗಿ ಹೊಂದಿಕೆಯಾಗುತ್ತಾರೆ. ಅವರ ವ್ಯಕ್ತಿತ್ವವು ಜಿಯೋಮಾರ್ಟ್‌ನ ಹಾಗೆಯೇ ವಿಶ್ವಾಸ, ನಂಬಿಕೆ ಮತ್ತು ಖಾತರಿಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಪ್ರೀತಿ ಪಾತ್ರರ ಜೊತೆಗೆ ವಿಶೇಷ ಕ್ಷಣಗಳನ್ನು ಕಳೆಯುವುದಕ್ಕೆ ನಮ್ಮ ಹೊಸ ಅಭಿಯಾನವು ಅನುವು ಮಾಡುತ್ತದೆ. ಇದರಲ್ಲಿ ಶಾಪಿಂಗ್ ಎಂಬುದು ಒಂದು ಅವಿಭಾಜ್ಯ ಅಂಗ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ. ಮೆಟ್ರೋ ಹೊರತಾದ ಪ್ರದೇಶಗಳು ಒಟ್ಟಾರೆ ಸೇಲ್ ನಲ್ಲಿ ಸುಮಾರು 60% ಪಾಲು ಹೊಂದಿದೆ. ಇದು ದೇಶದ ರಿಟೇಲ್ ವಲಯ ವಿಕೇಂದ್ರೀಕರಣಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಕ್ಯಾಂಪೇನ್ ಶೂಟಿಂಗ್‌ನ ಭಾಗವಾಗಿ, ಬಿಹಾರದ ಪ್ರಶಸ್ತಿ ಪುರಸ್ಕೃತ ಕಲಾವಿದೆ ಅಂಬಿಕಾ ದೇವಿಯವರ ಮಧುಬನಿ ಪೇಂಟಿಂಗ್ ಅನ್ನು ಧೋನಿಯವರಿಗೆ ವರಗಂಟಿ ಪ್ರದಾನ ಮಾಡಿದರು.

ಮಹೇಂದ್ರ ಸಿಂಗ್ ಧೋನಿ ಪ್ರತಿಕ್ರಿಯಿಸಿ, ಜಿಯೋಮಾರ್ಟ್‌ನ ಮೌಲ್ಯ ಮತ್ತು ಗುರುತಿಗೂ ನನಗೂ ಹೊಂದಿಕೆಯಾಗುತ್ತದೆ. ದೇಶೀಯ ಇ-ಕಾಮರ್ಸ್ ಬ್ರಾಂಡ್ ಆಗಿರುವ ಇದು ಭಾರತದಲ್ಲಿ ಡಿಜಿಟಲ್ ರಿಟೇಲ್ ಕ್ರಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಭಾರತವು ವೈವಿಧ್ಯಮ ಸಂಸ್ಕೃತಿ ಜನರು ಮತ್ತು ಹಬ್ಬಗಳಿಗೆ ಹೆಸರಾಗಿದೆ. ಭಾರತ ಮತ್ತು ಭಾರತೀಯರ ಸಂಭ್ರಮಕ್ಕೆ ಜಿಯೋಮಾರ್ಟ್‌ನ ಜಿಯೋ ಉತ್ಸವವು ಹೊಸ ಆಯಾಮವನ್ನು ನೀಡಿದೆ. ಜಿಯೋಮಾರ್ಟ್ ಜೊತೆಗೆ ಗುರುತಿಸಿಕೊಳ್ಳಲು ಮತ್ತು ಲಕ್ಷಾಂತರ ಭಾರತೀಯರ ಶಾಪಿಂಗ್ ಪಯಣದ ಭಾಗವಾಗುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago