ಕ್ರೀಡಾ ಸುದ್ದಿ

ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಪ್ರದರ್ಶನದಿಂದ ನೆದರ್ಲ್ಯಾಂಡ್ಸ್‌ ವಿರುದ್ಧ 81 ರನ್‌ಗಳ ಜಯ ಸಾಧಿಸಿದ ಪಾಕಿಸ್ತಾನ ತಂಡ

ಹೈದರಾಬಾದ್‌: ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಪಾಕಿಸ್ತಾನ ತಂಡ, ನೆದರ್ಲ್ಯಾಂಡ್ಸ್‌ ವಿರುದ್ಧ 81 ರನ್‌ಗಳ ಜಯ ಸಾಧಿಸಿದ್ದು, 2023ರ ವಿಶ್ವಕಪ್‌ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.

Advertisement
Advertisement
Advertisement

ಇಲ್ಲಿನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ‌ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ತಂಡ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದಾಗಿ 49 ಓವರ್‌ಗಳಲ್ಲಿ 286 ರನ್‌ಗಳಿಗೆ ಸರ್ವಪತನ ಕಂಡಿತು. ಪಾಕ್‌ ನೀಡಿದ ಗುರಿ ಬೆನ್ನತ್ತಿದ್ದ ನೆದರ್ಲ್ಯಾಂಡ್ಸ್‌ ತಂಡವು 41 ಓವರ್‌ಗಳಲ್ಲಿ 205 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

ಚೇಸಿಂಗ್‌ ಆರಂಭಿಸಿದ ನೆದರ್ಲ್ಯಾಂಡ್ಸ್‌ ಪದ ಆರಂಭಿಕ ಆಟಗಾರ ವಿಕ್ರಮಜಿತ್ ಸಿಂಗ್ 52 ರನ್‌ (67 ಎಸೆತ, 4 ಬೌಂಡರಿ, 1 ಸಿಕ್ಸರ್‌), ಆಲ್‌ರೌಂಡರ್‌ ಬಾಸ್ ಡಿ ಲೀಡೆ 67 ರನ್‌ (68 ಎಸೆತ, 2 ಸಿಕ್ಸರ್‌, 6 ಬೌಂಡರಿ) ಗಳಿಸಿ ತಂಡಕ್ಕೆ ನೆರವಾದರು. ಉಳಿದ ಆಟಗಾರರು ಪಾಕ್‌ ಬೌಲರ್‌ಗಳ ಮಾರಕ ದಾಳಿ ಎದುರಿಸುವಲ್ಲಿ ವಿಫಲರಾಗಿ ಪೆವಿಲಿಯನ್‌ ಸೇರಿಕೊಂಡರು. ಪರಿಣಾಮ ನೆದರ್ಲ್ಯಾಂಡ್ಸ್‌ 205 ರನ್‌ ಗಳಿಸಲಷ್ಟೇ ಸಾಧ್ಯವಾಯಿತು.

ಪಾಕಿಸ್ತಾನ ಪರ ಹ್ಯಾರಿಸ್‌ ರೌಫ್‌ 3 ವಿಕೆಟ್‌ ಕಿತ್ತರೆ, ಹಸನ್‌ ಅಲಿ 2 ವಿಕೆಟ್‌ ಹಾಗೂ ಶಾಹೀನ್‌ ಶಾ ಅಫ್ರಿದಿ, ಇಫ್ತಿಕಾರ್‌ ಅಹ್ಮದ್‌, ಮೊಹಮ್ಮದ್‌ ನವಾಜ್‌ ಹಾಗೂ ಶಾದಾಬ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಪಾಕ್‌ ತಂಡ ಮೊದಲ 9 ಓವರ್‌ಗಳಲ್ಲಿ ಕೇವಲ 38 ರನ್‌ ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡಿತ್ತು. ಮಧ್ಯ ಕ್ರಮಾಂಕದಲ್ಲಿ ಮೊಹಮ್ಮದ್‌ ರಿಜ್ವಾನ್‌ ಹಾಗೂ ಸೌದ್ ಶಕೀಲ್ ಬ್ಯಾಟಿಂಗ್‌ ನೆರವಿನಿಂದ ತಂಡ ಚೇರಿಸಿಕೊಂಡಿತು. ರಿಜ್ವಾನ್‌ 75 ಎಸೆತಗಳಲ್ಲಿ 68 ರನ್‌ (8 ಬೌಂಡರಿ) ಗಳಿಸಿದ್ರೆ, ಶಕೀಲ್‌ 52 ಎಸೆತಗಳಲ್ಲಿ 68 ರನ್‌ (9 ಬೌಂಡರಿ, 1 ಸಿಕ್ಸರ್)‌ ಕೊಡುಗೆ ನೀಡಿದರು. ಕೊನೆಯಲ್ಲಿ ಮೊಹಮ್ಮದ್‌ ನವಾಜ್‌ 39 ರನ್‌, ಶಾದಾಬ್‌ ಖಾನ್‌ 32 ರನ್‌ ಗಳಿಸಿ ಪಾಕ್‌ ತಂಡ 280ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ನೆದರ್ಲ್ಯಾಂಡ್ಸ್‌ ಪರ ಬಾಸ್ ಡಿ ಲೀಡೆ 4 ವಿಕೆಟ್‌ ಕಿತ್ತರೆ, ಕಾಲಿನ್ ಅಕರ್ಮನ್ 2 ವಿಕೆಟ್‌ ಪಾಲ್ ವ್ಯಾನ್ ಮೀಕೆರೆನ್, ಆರ್ಯನ್ ದತ್, ಲೋಗನ್ ವ್ಯಾನ್ ಬೀಕ್ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago