ಜಿಲ್ಲೆ

ನೊಂದ ಕುಟುಂಬಕ್ಕೆ ನೆರವಾದ ಅಂಚೆ ಅಪಘಾತ ವಿಮೆ: 399 ರೂ ಕಟ್ಟಿದ್ದಕ್ಕೆ 10 ಲಕ್ಷ ರೂ ಪರಿಹಾರ

ಮಂಡ್ಯ: ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಕ್ಕೆ ಅಂಚೆ ಇಲಾಖೆ ಅಪಘಾತ ವಿಮೆ ನೆರವಿಗೆ ಬಂದಿದೆ. ಅದರಂತೆ 399 ರೂ ಪಾವತಿಸಿ ಪಾಲಿಸಿ ಪಡೆದಿದ್ದ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಸಿಕ್ಕಿದೆ.

Advertisement
Advertisement
Advertisement

ಮಳವಳ್ಳಿ ತಾಲೂಕು ಬಾಚೇನಹಳ್ಳಿ ಗ್ರಾಮದ ರೈತ ಮಹಿಳೆ ಪುಟ್ಟಮ್ಮ ಎಂಬುವರಿಗೆ ವಿಮೆ ಪರಿಹಾರದ ನೆರವು ದೊರೆಕಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಸಹಕಾರಿಯಾಗಿದೆ. ಮಾತ್ರವಲ್ಲದೆ ಅಂಚೆ ಇಲಾಖೆಯ ಅಪಘಾತ ವಿಮೆಯ ಮಹತ್ವ ಎಷ್ಟಿದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ.

ಏನಿದು ಪ್ರಕರಣ?

ಬಾಚೇನಹಳ್ಳಿ ಗ್ರಾಮದ ಬಸವರಾಜು 2022 ಅಕ್ಟೋಬರ್‌ನಲ್ಲಿ ಅಂಚೆ ಇಲಾಖೆಯಲ್ಲಿ ಟಾಟಾ ಕಂಪನಿಯ ಅಪಘಾತ ವಿಮೆ ಪಾಲಿಸಿ ಪಡೆದುಕೊಂಡಿದ್ದರು. ಆದರೆ ದುರಾದೃಷ್ಟವಶಾತ್ 2023 ಮಾರ್ಚ್‌ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರಿಂದಾಗಿ ಕುಟುಂಬದ ಆಧಾರಸ್ತಂಭವೇ ಇಲ್ಲದಂತಾಗಿತ್ತು. ಇನ್ನು ಬಸವರಾಜುವಿಮೆ ಮಾಡಿಸಿರುವ ಬಗ್ಗೆ ಕುಟುಂಬದವರಿಗೆ ಮಾಹಿತಿ ಇರಲಿಲ್ಲ.

ಗ್ರಾಮದ ಅಂಚೆ ಕಚೇರಿ ಸಿಬ್ಬಂದಿ ವಿವರ ನೀಡಿದ್ದರು. ಬಳಿಕ ಮಂಡ್ಯ ಕಚೇರಿಗೆ ಮಾಹಿತಿ ನೀಡಿದ್ದರು. ನಂತರ ಅಪಘಾತಕ್ಕೆ ಸಂಬಂಧಿಸಿದ ದಾಖಲೆ ಸಂಗ್ರಹಿಸಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅದರಂತೆ 10 ಲಕ್ಷ ರೂ ಪರಿಹಾರದ ಮೊತ್ತ ಬಂದಿದ್ದು, ಗುರುವಾರ ನಗರದ ಕಚೇರಿಯಲ್ಲಿ ಅಂಚೆ ಅಧೀಕ್ಷಕ ಎಂ.ಲೋಕನಾಥ್, ಬಸವರಾಜು ಕುಟುಂಬದವರಿಗೆ ಚೆಕ್ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಉಪ ಅಂಚೆ ಅಧೀಕ್ಷಕ ಗಜೇಂದ್ರ, ಅಂಚೆ ನಿರೀಕ್ಷಕ ಷಣ್ಮುಗಂ, ಬ್ರಾೃಂಚ್ ಮ್ಯಾನೇಜರ್ ದೀಪಕ್, ವಿಭಾಗೀಯ ಮ್ಯಾನೇಜರ್ ಗಿರೀಶ್ ಇತರರಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago