ಕ್ರೀಡಾ ಸುದ್ದಿ

ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡಕ್ಕೆ ಚಿನ್ನ

ಹ್ಯಾಂಗ್ ಝೂ: 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಇತಿಹಾಸವನ್ನೇ ನಿರ್ಮಿಸಿದೆ, ಬಿಲ್ಲುಗಾರಿಕೆಯಲ್ಲಿ ಭಾರತ ನಾಲ್ಕು ಪದಕಗಳನ್ನು ಬಾಚಿಕೊಂಡ ಬೆನ್ನಲ್ಲೇ ಭಾರತದ ಪದಕದ ಪಟ್ಟಿ 99ಕ್ಕೆ ಏರಿತ್ತು ಇದೀಗ ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನೇ ಬರೆದಿದೆ.

Advertisement
Advertisement
Advertisement

ನಿವಾರ ನಡೆದ ಏಷ್ಯನ್ ಗೇಮ್ಸ್​ನ ಆರ್ಚರಿ ಮಹಿಳೆಯರ ಸಂಯುಕ್ತ ವೈಯಕ್ತಿಕ ಸ್ಪರ್ಧೆಯಲ್ಲಿ ಜ್ಯೋತಿ ಸುರೇಖಾ ಚಿನ್ನದ ಪದಕ ಹಾಗೂ ಅದಿತಿ ಸ್ವಾಮಿ ಕಂಚಿನ ಪದಕಕ್ಕೆ ಕೊರೊಳಡ್ಡಿದ್ದಾರೆ. ಮತ್ತೊಂದು ಕಡೆ ಪುರುಷರ ವೈಯಕ್ತಿಕ ಕಾಂಪೌಂಡ್ ಸ್ಪರ್ಧೆಯಲ್ಲಿ ಭಾರತದ ಬಿಲ್ಲುಗಾರ ಓಜಸ್ ಡಿಯೋಟಾಲೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇನ್ನು ಅಭಿಷೇಕ್ ವರ್ಮಾ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತದ ಮಹಿಳಾ ಕಬಡ್ಡಿ ತಂಡ ಫೈನಲ್‌ನಲ್ಲಿ ಚಿನ್ನ ಗೆದ್ದುಕೊಂಡಿದೆ.

ಮಹಿಳಾ ಕಬಡ್ಡಿಯಿಂದ ನೂರನೇ ಪದಕ:

ಭಾರತಕ್ಕೆ ನೂರನೇ ಪದಕ ಬಂದಿದ್ದು ಮಹಿಳೆಯರ ಕಬಡ್ಡಿಯಿಂದ. ಈ ರೋಚಕ ಪಂದ್ಯದಲ್ಲಿ ಭಾರತ 26-25 ಅಂಕಗಳಿಂದ ಚೈನೀಸ್ ತೈಪೆಯನ್ನು ಸೋಲಿಸಿ ಚಿನ್ನವನ್ನು ಗೆದ್ದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿತು. ಅಷ್ಟೇ ಅಲ್ಲ ಈ ಮೂಲಕ ಭಾರತಕ್ಕೆ ಏಷ್ಯನ್​ ಗೇಮ್ಸ್​ನಲ್ಲಿ ಇದುವರೆಗೂ 25 ಚಿನ್ನ, ಬೆಳ್ಳಿ 35, 40 ಕಂಚಿನ ಪದಕಗಳು ಲಭಿಸಿದಂತಾಗಿದೆ. ಇನ್ನಷ್ಟು ಚಿನ್ನದ ಪದಕಗಳು ಪದಕ ಪಟ್ಟಿ ಸೇರುವ ಸಾಧ್ಯತೆಗಳೂ ಇವೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago