ಹ್ಯಾಂಗ್ಝೌ: ಭಾರತ – ಅಫ್ಘಾನಿಸ್ತಾನ್ ನಡುವಣ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ ಟೂರ್ನಿಯುದ್ದಕೂ ಉತ್ತಮ ಪ್ರದರ್ಶನದೊಂದಿಗೆ ಫೈನಲ್ಗೆ ಪ್ರವೇಶಿಸಿದ ಟೀಮ್ ಇಂಡಿಯಾಗೆ ಚಿನ್ನದ ಪದಕ ಒಲಿದಿದೆ. ಇನ್ನು ಅಫ್ಘಾನಿಸ್ತಾನ್ ಬೆಳ್ಳಿ ಪದಕ ಗೆದ್ದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.
ಹ್ಯಾಂಗ್ಝೌನ ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.
ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು. ಈ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…