ಜಿಲ್ಲೆ

32 ಹಿರಿ ಜೀವಗಳಿಗೆ ಆಧಾರಸ್ತಂಭವಾಗಿದ್ದ ದಂಪತಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಸಾವು

ಮಡಿಕೇರಿ: ಮನೆ ಮಠ ಇಲ್ಲದೆ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದ 32 ಹಿರಿ ಜೀವಗಳಿಗೆ ಆಧಾರಸ್ತಂಭವಾಗಿದ್ದರು. ತಮ್ಮ ಬಳಿ ಹಣ ಇರಲಿ ಇಲ್ಲದೇ ಹೋಗಲಿ ಆಶ್ರಯ ನೀಡಿ ಮೂರು ಹೊತ್ತು ಊಟ ಹಾಕಿ ತನ್ನ ಕುಟುಂಬ ಸದಸ್ಯರು ಎಂದೇ ಭಾವಿಸಿ ಅವರಿಗಾಗಿಯೇ ಜೀವನ ಮುಡಿಪಾಗಿಟ್ಟ ದಂಪತಿ ಇಂದು ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಅವರನ್ನೆ ನಂಬಿಕೊಂಡು ಬದುಕಿನ ಬಂಡಿ ಸಾಗಿಸುತ್ತಿದ್ದ 32 ಹಿರಿಯ ಜೀವಗಳು ಇಂದು ನಿಜಕ್ಕೂ ಅನಾಥರಾಗಿದ್ದಾರೆ.

Advertisement
Advertisement
Advertisement

ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿ ರಮೇಶ್ ಮತ್ತು ಅವರ ಪತ್ನಿ ರೂಪಾ ಅವರು ಕಳೆದ 8 ವರ್ಷಗಳಿಂದ ವಿಕಾಸ್ ಜನಸೇವಾ ಟ್ರಸ್ಟ್ ಹೆಸರಿನ ಮೂಲಕ ಅನಾಥ ಆಶ್ರಮ ನಡೆಸುತ್ತಿದ್ದರು. ಸರ್ಕಾರದ ಯಾವುದೇ ಅನುದಾನವಿಲ್ಲದೆ ದಾನಿಗಳ ಸಹಾಯ ಮತ್ತು ಸ್ವಂತ ದುಡಿಮೆಯಿಂದ ಬಂದ ಹಣದಲ್ಲಿ 32 ಅನಾಥ ವೃದ್ಧರನ್ನು ಸಾಕಿ ಸಲಹುತ್ತಿದ್ದರು. ಆದರೆ ಅಕ್ಟೋಬರ್ 4 ರ ರಾತ್ರಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಪತಿ-ಪತ್ನಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ರಮೇಶ್ ಸಾವನ್ನಪ್ಪಿದ್ರು. ಇದಾದ ಬಳಿಕ ರಮೇಶ್ ಪತ್ನಿ ರೂಪ ಅವರು ಸೋಮವಾರ ರಾತ್ರಿ ಸುಮಾರು 11:30ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಇಬ್ಬರು ಒಟ್ಟಿಗೆ ಆಶ್ರಮ ಕೆಲಸ ಮಾಡಿಕೊಂಡು ಹಿರಿ ಜೀವಿಗಳಿಗೆ ಆಶ್ರಯ ನೀಡಿದ ಪತಿ-ಪತ್ನಿ ಇಬ್ಬರು ಮರಳಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago