ಕ್ರೀಡಾ ಸುದ್ದಿ

ವಿಶ್ವಕಪ್‌ ಟೂರ್ನಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಇಂಗ್ಲೆಂಡ್‌ ಗೆ 137 ರನ್‌ಗಳ ಭರ್ಜರಿ ಜಯ

ಧರ್ಮಶಾಲಾ: ಬಾಂಗ್ಲಾದೇಶದ ವಿರುದ್ಧ ಇಂಗ್ಲೆಂಡ್‌ 137 ರನ್‌ಗಳ ಭರ್ಜರಿ ಜಯ ಸಾಧಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

Advertisement
Advertisement
Advertisement

ಇಂಗ್ಲೆಂಡ್‌ ನೀಡಿದ 365 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 48.2 ಓವರ್‌ಗಳಲ್ಲಿ 227 ರನ್‌ಗಳಿಗೆ ಸರ್ವಪತನ ಕಂಡಿತು.

ಬಾಂಗ್ಲಾ ಪರವಾಗಿ ಆರಂಭಿಕ ಆಟಗಾರ ಲಿಟ್ಟನ್‌ ದಾಸ್‌ 76 ರನ್‌ (66 ಎಸೆತ, 7 ಬೌಂಡರಿ, 2 ಸಿಕ್ಸರ್‌) ಹೊಡೆದರೆ ಮುಷ್ಫಿಕರ್‌ ರಹೀಂ 51 ರನ್‌ (64 ಎಸೆತ, 4 ಬೌಂಡರಿ) ತೌಹಿದ್‌ 39 ರನ್‌ (61 ಎಸೆತ, 2 ಬೌಂಡರಿ) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.

ರೀಸ್ ಟೋಪ್ಲಿ 4 ವಿಕೆಟ್‌, ಕ್ರೀಸ್‌ ವೋಕ್ಸ್‌ 2 ವಿಕೆಟ್‌ ಪಡೆದರು. ಸ್ಯಾಮ್‌ ಕರ್ರನ್‌, ಮಾರ್ಕ್‌ ವುಡ್‌, ಅದಿಲ್‌ ರಶೀದ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಪರವಾಗಿ ಜಾನಿ ಬೈರ್‌ಸ್ಟೋವ್‌ ಮತ್ತು ಡೇವಿಡ್‌ ಮಲಾನ್‌ ಮೊದಲ ವಿಕೆಟಿಗೆ 107 ಎಸೆತಗಳಲ್ಲಿ 115 ರನ್‌ ಜೊತೆಯಾಟವಾಡಿದರು. ಜಾನಿ ಬೈರ್‌ಸ್ಟೋವ್‌ 52 ರನ್‌(59 ಎಸೆತ, 8 ಬೌಂಡರಿ ಹೊಡೆದು ಔಟಾದರೆ, ಮಲಾನ್‌ 140 ರನ್‌ (107 ಎಸೆತ, 16 ಬೌಂಡರಿ, 5 ಸಿಕ್ಸರ್‌), ನಾಯಕ ಜೋ ರೂಟ್‌ 82 ರನ್‌ (68 ಎಸೆತ, 8 ಬೌಂಡರಿ, 1 ಸಿಕ್ಸರ್)‌ ಹೊಡೆದು ಔಟಾದರು. ಅಂತಿಮವಾಗಿ ಇಂಗ್ಲೆಂಡ್‌ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 364 ರನ್‌ ಹೊಡೆಯಿತು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago