ಧರ್ಮಶಾಲಾ: ಬಾಂಗ್ಲಾದೇಶದ ವಿರುದ್ಧ ಇಂಗ್ಲೆಂಡ್ 137 ರನ್ಗಳ ಭರ್ಜರಿ ಜಯ ಸಾಧಿಸಿ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಇಂಗ್ಲೆಂಡ್ ನೀಡಿದ 365 ರನ್ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 48.2 ಓವರ್ಗಳಲ್ಲಿ 227 ರನ್ಗಳಿಗೆ ಸರ್ವಪತನ ಕಂಡಿತು.
ಬಾಂಗ್ಲಾ ಪರವಾಗಿ ಆರಂಭಿಕ ಆಟಗಾರ ಲಿಟ್ಟನ್ ದಾಸ್ 76 ರನ್ (66 ಎಸೆತ, 7 ಬೌಂಡರಿ, 2 ಸಿಕ್ಸರ್) ಹೊಡೆದರೆ ಮುಷ್ಫಿಕರ್ ರಹೀಂ 51 ರನ್ (64 ಎಸೆತ, 4 ಬೌಂಡರಿ) ತೌಹಿದ್ 39 ರನ್ (61 ಎಸೆತ, 2 ಬೌಂಡರಿ) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.
ರೀಸ್ ಟೋಪ್ಲಿ 4 ವಿಕೆಟ್, ಕ್ರೀಸ್ ವೋಕ್ಸ್ 2 ವಿಕೆಟ್ ಪಡೆದರು. ಸ್ಯಾಮ್ ಕರ್ರನ್, ಮಾರ್ಕ್ ವುಡ್, ಅದಿಲ್ ರಶೀದ್, ಲಿಯಾಮ್ ಲಿವಿಂಗ್ಸ್ಟೋನ್ ತಲಾ ಒಂದೊಂದು ವಿಕೆಟ್ ಪಡೆದರು.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಪರವಾಗಿ ಜಾನಿ ಬೈರ್ಸ್ಟೋವ್ ಮತ್ತು ಡೇವಿಡ್ ಮಲಾನ್ ಮೊದಲ ವಿಕೆಟಿಗೆ 107 ಎಸೆತಗಳಲ್ಲಿ 115 ರನ್ ಜೊತೆಯಾಟವಾಡಿದರು. ಜಾನಿ ಬೈರ್ಸ್ಟೋವ್ 52 ರನ್(59 ಎಸೆತ, 8 ಬೌಂಡರಿ ಹೊಡೆದು ಔಟಾದರೆ, ಮಲಾನ್ 140 ರನ್ (107 ಎಸೆತ, 16 ಬೌಂಡರಿ, 5 ಸಿಕ್ಸರ್), ನಾಯಕ ಜೋ ರೂಟ್ 82 ರನ್ (68 ಎಸೆತ, 8 ಬೌಂಡರಿ, 1 ಸಿಕ್ಸರ್) ಹೊಡೆದು ಔಟಾದರು. ಅಂತಿಮವಾಗಿ ಇಂಗ್ಲೆಂಡ್ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 364 ರನ್ ಹೊಡೆಯಿತು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…