ಚಲನಚಿತ್ರ

ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ರಿಷಬ್ ಶೆಟ್ಟಿ ಸಿನೆಮಾ

ರಿಷಬ್ ಶೆಟ್ಟಿಯ ‘ಶಿವಮ್ಮ’ ಸಿನಿಮಾ ವಿಶ್ವದ ಹಲವು ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ.

Advertisement
Advertisement
Advertisement

ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿದೆ, ಕೆಲವು ಚಲನಚಿತ್ರೋತ್ಸಗಳಲ್ಲಿ ಪ್ರಶಸ್ತಿಯನ್ನೂ ಗೆದ್ದಿದೆ. ಇದೀಗ ಭಾರತದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.

‘ಶಿವಮ್ಮ’ ಸಿನಿಮಾವು ಸರ್ಕಾರಿ ಶಾಲೆಯಲ್ಲಿ ಬಿಸಿಊಟ ಅಡುಗೆ ಮಾಡುವ ಮಹಿಳೆಯೊಬ್ಬಾಕೆ ಹೆಲ್ತ್​ ಪ್ರಾಡೆಕ್ಟ್ ಸೇಲ್ ಮಾಡುವ ನೆಟ್​ವರ್ಕಿಂಗ್ ಸಂಸ್ಥೆಯ ಏಜೆಂಟ್ ಆಗುವ ಕತೆ. ಸಿನಿಮಾದಲ್ಲಿ ನಟಿಸಿರುವ ಬಹುತೇಕರು ನಟನೆಯ ಹಿನ್ನೆಲೆ ಇರುವವರಲ್ಲ, ಬದಲಿಗೆ ಒಂದು ಹಳ್ಳಿಯ ಜನರೇ ಸಿನಿಮಾದಲ್ಲಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಕೊಪ್ಪಳ ಜಿಲ್ಲೆಯ ಬಳಿ ಇರುವ ಯರೆಹೆಂಚಿನಾಳ್ ಹೆಸರಿನ ಹಳ್ಳಿಯೊಂದರಲ್ಲಿ ಚಿತ್ರೀಕರಣ ಮಾಡಲಾಗಿದೆ.

ಸಿನಿಮಾವನ್ನು ಜೈಶಂಕರ್ ಆರ್ಯರ್ ನಿರ್ದೇಶನ ಮಾಡಿದ್ದು, ಸಿನಿಮಾಕ್ಕೆ ಬಂಡವಾಳ ಹೂಡಿರುವುದು ನಟ, ನಿರ್ದೇಶಕ ರಿಷಬ್ ಶೆಟ್ಟಿ. ಸಿನಿಮಾವು ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,” ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ. ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಎಂಬ ಖ್ಯಾತಿಯನ್ನು ಈ ಸಿನಿಮಾ ಪಡೆದಿದೆ.

ಸಿನಿಮಾದ ಟ್ರೈಲರ್ ಅಕ್ಟೋಬರ್ 10ರಂದು ರಿಷಬ್ ಶೆಟ್ಟಿ ಫಿಲಮ್ಸ್ ಯೂಟ್ಯೂಬ್ ಚಾನೆಲ್​ನಲ್ಲಿ ಬಿಡುಗಡೆ ಆಗಿದೆ. ಸಿನಿಮಾವನ್ನು ನೈಜತೆಗೆ ಅತಿ ಹೆಚ್ಚು ಹತ್ತಿರವಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago