ಕೇರಳ : ದೇಶದ ಅತೀ ಹಿರಿಯ ಸಾಕ್ಷರತಾ ವಿದ್ಯಾರ್ಥಿನಿ ಕೇರಳದ ಕಾರ್ತ್ಯಾಯಿನಿ ಅಮ್ಮ ಆಲಪ್ಪುಳ ಜಿಲ್ಲೆಯ ಹರಿಪಾಡ್ ಮುತ್ತುಲ್ಲದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು.
ಕೇರಳ ಸರ್ಕಾರದ ‘ಅಕ್ಷರಲಕ್ಷಂ’ ಪರೀಕ್ಷೆಯಲ್ಲಿ ಕಾರ್ತ್ಯಾಯಿನಿ ಅಮ್ಮ ಟಾಪರ್ ಆಗಿದ್ದರು. 40,000 ಮಂದಿ ಈ ಪರೀಕ್ಷೆ ಬರೆದಿದ್ದು, ಇದರಲ್ಲಿ ಕಾರ್ತ್ಯಾಯಿನಿ ಅವರು 98 ಪರ್ಸೆಂಟ್ ಮಾರ್ಕ್ಸ್ ಪಡೆದಿದ್ದರು.
2018ರಲ್ಲಿ, ನಾರಿಶಕ್ತಿ ಪ್ರಶಸ್ತಿಯನ್ನು ಗೆದ್ದರು. ಕಳೆದ ಗಣರಾಜ್ಯೋತ್ಸವದ ಪರೇಡ್ನಲ್ಲಿ ನಾರಿಶಕ್ತಿ ಪ್ರಶಸ್ತಿ ವಿಜೇತೆ ಕಾರ್ತ್ಯಾಯಿನಿ ಅಮ್ಮನವರ ಸ್ತಬ್ಧಚಿತ್ರ ಸಹ ಸೇರಿತ್ತು.
‘ವಯಸ್ಸಿನ ಹೊರತಾಗಿಯೂ,ಕಲಿಯುವ ಇಚ್ಛೆ ನೂರಾರು ಮಹಿಳೆಯರಿಗೆ ಸ್ಫೂರ್ತಿಯಾಗಿದೆ.ಕಾರ್ತ್ಯಾನಿಯಮ್ಮ ಕೇರಳದ ಹೆಮ್ಮೆ. ನಾವು ಆದರ್ಶಪ್ರಾಯ ವ್ಯಕ್ತಿತ್ವವನ್ನು ಕಳೆದುಕೊಂಡಿದ್ದೇವೆ’ ಎಂದು ಕಾರ್ತ್ಯನಿಯಮ್ಮ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…