ಇತರೆ

ಜಿಹಾದಿ ಭಯೋತ್ಪಾದನೆ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಬೆನ್ನಿಗೆ ನಿಲ್ಲುವ ಅಗತ್ಯವಿದೆ ! – ಹಿಂದೂ ಜನಜಾಗೃತಿ ಸಮಿತಿ

ಇಸ್ರೇಲ್ ಮೇಲೆ ‘ಹಮಾಸ್’ದಾಳಿ ಖಂಡನೆ; ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೂ ಖಂಡನೆ !

Advertisement
Advertisement
Advertisement

ಇತ್ತೀಚೆಗಷ್ಟೇ ಪ್ಯಾಲೆಸ್ತೀನ್‌ನ ಭಯೋತ್ಪಾದಕ ಸಂಘಟನೆ ‘ಹಮಾಸ್’ ನ ಭಯೋತ್ಪಾದಕರು ಇಸ್ರೇಲ್ ಮೇಲೆ ಸಾವಿರಾರು ರಾಕೆಟ್‌ಗಳಿಂದ ಭೂಮಿ ಮತ್ತು ಸಮುದ್ರದ ಮೂಲಕ ನುಗ್ಗಿ ದಾಳಿ ಮಾಡಿ ನೂರಾರು ಮುಗ್ಧ ಇಸ್ರೇಲಿ ನಾಗರಿಕರನ್ನು ಕೊಂದರು. ಈ ಭಯೋತ್ಪಾದಕ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಮಂಡಿಸಿದರು. ಭಾರತದಲ್ಲಿಯೂ ಯಹೂದಿ ಸಹೋದರರು ಶಾಂತಿಯುತವಾಗಿ ಬದುಕುತ್ತಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಯಹೂದಿ ಸಹೋದರರ ಜೊತೆ ಇದೆ, ಎಂದೂ ಸಹ ಶ್ರೀ. ಶಿಂದೆ ಇವರು ಹೇಳಿದ್ದಾರೆ.

ಇಂದು ಇಸ್ರೇಲ್‌ನಲ್ಲಿ ದಾಳಿ ನಡೆದಿದೆ, ಈ ಹಿಂದೆ ಕಾಶ್ಮೀರದಲ್ಲೂ ಇಂತಹ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದವು; ಇಂತಹ ದಾಳಿಗಳು ನಾಳೆ ಎಲ್ಲಿಯಾದರೂ ನಡೆಯಬಹುದು. ಜಿಹಾದಿ ಭಯೋತ್ಪಾದನೆಯು ಅಂತಾರಾಷ್ಟ್ರೀಯ ಸಮಸ್ಯೆಯಾಗಿದೆ. ಇದನ್ನು ವಿಶ್ವ ಮಟ್ಟದಲ್ಲಿ ವಿರೋಧಿಸಬೇಕು. ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ತಕ್ಷಣವೇ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿ ಜಿಹಾದಿ ಭಯೋತ್ಪಾದನೆಯ ವಿರುದ್ಧ ನಿಲುವು ತೆಗೆದುಕೊಂಡರು. ಭಾರತ ಸರಕಾರದ ಈ ನಿಲುವನ್ನು ಹಿಂದೂ ಜನಜಾಗೃತಿ ಸಮಿತಿಯೂ ಬೆಂಬಲಿಸುತ್ತದೆ.

ದುರಾದೃಷ್ಟವಶಾತ್ ಕಾಂಗ್ರೆಸ್ ಪಕ್ಷದ ಕೇಂದ್ರ ಸಮಿತಿ ಸಭೆಯಲ್ಲಿ ಪ್ಯಾಲೆಸ್ತೀನ್ ಬೆಂಬಲದ ನಿಲುವನ್ನು ತೆಗೆದುಕೊಳ್ಳಲಾಗಿದೆ ಎಂದು ಘೋಷಿಸಿದರು. ಒಂದೆಡೆ, ಪ್ಯಾಲೆಸ್ತೀನ್ ನ ಭೂಮಿ, ಸ್ವ-ಆಡಳಿತ ಮತ್ತು ಸ್ವಾಭಿಮಾನ ಮತ್ತು ಘನತೆಯ ಜೀವನಕ್ಕಾಗಿ ಹಕ್ಕನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷ ತನ್ನ ನಿಲುವನ್ನು ಮಂಡಿಸಿತು; ಆದರೆ ಅದೇ ಪ್ಯಾಲೆಸ್ತೀನ್ ನೆಲದಿಂದ ಭಯೋತ್ಪಾದಕ ಸಂಘಟನೆ ‘ಹಮಾಸ್’ ಇಸ್ರೇಲ್ ಮೇಲೆ ದಾಳಿ ಮಾಡಿ ಸಾವಿರಾರು ಅಮಾಯಕ ನಾಗರಿಕರನ್ನು ಕೊಂದು, ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡಿತು. ಈ ಬಗ್ಗೆ ಕಾಂಗ್ರೆಸ್ ಚಕಾರವೆತ್ತಿಲ್ಲ.

ಪ್ಯಾಲೆಸ್ತೀನ್‌ಗೆ ಸ್ವಾಭಿಮಾನ ಮತ್ತು ಘನತೆಯಿಂದ ಬದುಕುವ ಹಕ್ಕಿದ್ದರೆ, ಇಸ್ರೇಲಿ ಜನರಿಗೆ ಇಲ್ಲವೇ ? ಇಸ್ರೇಲ್ ಮೇಲೆ ದಾಳಿಯಾದ ನಂತರವೂ ವಿರೋಧಿಸದೆ ಮತ್ತೊಂದು ಕೆನ್ನೆಯನ್ನು ಕೊಟ್ಟು ‘ಗಾಂಧಿಗಿರಿ’ ತೋರಿಸುವುದನ್ನು ಕಾಂಗ್ರೆಸ್ ನಿರೀಕ್ಷಿಸುತ್ತದೆಯೇ ? ಕಾಂಗ್ರೆಸ್‌ನ ಈ ನಿಲುವು ಜಿಹಾದಿ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ. ಆದ್ದರಿಂದ ಇಸ್ರೇಲ್ ಮೇಲಿನ ದಾಳಿಗೆ ‘ಹಮಾಸ್’ಗೆ ಎಷ್ಟು ಖಂಡಿಸುತ್ತೇವೆಯೋ ,ಅಷ್ಟೇ ಜಿಹಾದಿ ಭಯೋತ್ಪಾದನೆಯನ್ನು ಬೆಂಬಲಿಸುವ ಕಾಂಗ್ರೆಸ್‌ ಅನ್ನೂ ಖಂಡಿಸಬೇಕು ಎಂದು ಸಮಿತಿ ಹೇಳಿದೆ.

ಅದರಂತೆ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ವಿರುದ್ಧ ಮೆರವಣಿಗೆ ನಡೆಸಿದರು, ಇದು ತುಂಬಾ ಗಂಭೀರವಾಗಿದೆ. ಇದರಿಂದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಯೋತ್ಪಾದಕ ಸಂಘಟನೆ ‘ಹಮಾಸ್’ಗೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದಾರೆ. ಈ ಘಟನೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.ಯ) ಮೂಲಕ ತನಿಖೆ ನಡೆಸಬೇಕೆಂದೂ ನಾವು ಒತ್ತಾಯಿಸುತ್ತೇವೆ.

ತಮ್ಮ ಸವಿನಯ, ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ. ಸಂಪರ್ಕ : 9987966666

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago