ಅಂತರಾಷ್ಟ್ರೀಯ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್‌ ಹತ್ಯೆ

ಇಸ್ಲಾಮಾಬಾದ್ : ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು (41) ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

Advertisement
Advertisement
Advertisement

ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸದಸ್ಯನಾಗಿದ್ದು, 2016ರ ಜನವರಿ 2 ರಂದು ಪ್ರಾರಂಭವಾದ ಪಠಾಣ್ ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಆತ ಸಿಯಾಲ್‌ಕೋಟ್‌ನಲ್ಲಿ ದಾಳಿಯನ್ನು ನಡೆಸಲು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಭಯೋತ್ಪಾದಕರನ್ನು ಪಠಾಣ್ ಕೋಟ್‌ಗೆ ಕಳುಹಿಸಿದ್ದ.

ಕಾನೂನುಬಾಹಿರ (ಚಟುವಟಿಕೆಗಳು) ಕಾಯಿದೆಯ ಅಡಿಯಲ್ಲಿ ಭಯೋತ್ಪಾದನೆಯ ಆರೋಪದ ಮೇಲೆ ನವೆಂಬರ್ 1994 ರಲ್ಲಿ ಆತನನ್ನು ಭಾರತದಲ್ಲಿ ಬಂಧಿಸಲಾಗಿತ್ತು. ಆತನನ್ನು ವಿಚಾರಣೆಗೆ ಒಳಪಡಿಸಿ, ಜೈಲಿಗೆ ಹಾಕಲಾಗಿತ್ತು. ಭಾರತದಲ್ಲಿ ಶಿಕ್ಷೆ ಅನುಭವಿಸಿದ ನಂತರ ಆತನನ್ನು 2010 ರಲ್ಲಿ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಯಿತು.

ಭಾರತ ಸರ್ಕಾರ ಆತನನ್ನು ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago