ಉಡುಪಿ : ಶ್ರೀ ಕೃಷ್ಣ, ಮಹಾಕಾಳಿ -ಕೊಲ್ಲೂರು ಮೂಕಾಂಬಿಕೆ ಇರುವ ನಾಡು ಉಡುಪಿ. ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ನಮ್ಮ ನಂಬಿಕೆ ನಮ್ಮದು ದೇಶದಲ್ಲಿ ಎಲ್ಲರಿಗೂ ಅವಕಾಶ ಇದೆ. ಆಸ್ತಿಕರಿಗೂ ನಾಸ್ತಿಕರಿಗೂ ನಮ್ಮ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಹುದು. ವಿಕೃತವಾದ ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದರು. ಯಾವ ಆಧಾರದಲ್ಲಿ ಮಹಿಷಾ ದಸರಾ ಆಚರಣೆ ಮಾಡುತ್ತೀರಿ ಗೊತ್ತಿಲ್ಲ, ಇದರ ಹಿಂದೆ ಇರುವ ಶಕ್ತಿ ಯಾವುದು ಗೊತ್ತಿಲ್ಲ.. ಆದರೆ ಉಡುಪಿ ಎಂಬ ಧಾರ್ಮಿಕ ಜಿಲ್ಲೆಯಲ್ಲಿ ಮಹಿಷಾ ದಸರ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಮಾನಸಿಕತೆಯನ್ನು ಜಿಲ್ಲೆಯ ಜನ ಅರ್ಥ ಮಾಡಿಕೊಳ್ಳುತ್ತಾರೆ. ನಿಮ್ಮ ವಿಕೃತಿಯನ್ನು ನಿಲ್ಲಿಸಿ ಆಸ್ತಿಕರ ನಂಬಿಕೆಗೆ ಬೆಲೆಕೊಡಿ. ದೇವಿ ದುಷ್ಟರನ್ನು ರಾಕ್ಷಸರನ್ನು ಸಂಹಾರ ಮಾಡಿದವಳು ಎಂಬ ನಂಬಿಕೆಯಿದೆ. ದುಷ್ಟರ ಸಂಹಾರ ಮಾಡಲು ನಿಮಗೆ ಏನು ಸಮಸ್ಯೆ ಆಗಿದೆ ನನಗೆ ಅರ್ಥವಾಗುತ್ತಿಲ್ಲ. ಮಹಿಷಾ ದಸರ ಮಾಡುವವರು ಮರು ಚಿಂತನೆ ಮಾಡಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…