ವ್ಯವಹಾರ

ಟೆಕ್‌ ಉದ್ಯಮಕ್ಕೆ ಸೆಡ್ಡು ಹೊಡೆದ 16 ವರ್ಷದ ಭಾರತೀಯ ಹುಡುಗಿ

ಪ್ರಾಂಜಲಿ ಅವಸ್ಥಿ ಎಂಬ 16 ವರ್ಷದ ಭಾರತೀಯ ಹುಡುಗಿ ತನ್ನ AI ಸ್ಟಾರ್ಟ್ಅಪ್ (ಕೃತಕ ಬುದ್ಧಿಮತ್ತೆ) Delv.AI ಮೂಲಕ ಟೆಕ್ ಉದ್ಯಮಕ್ಕೆ ಸೆಡ್ಡು ಹೊಡೆದಿದ್ದಾಳೆ. ಮಿಯಾಮಿ ಟೆಕ್ ವೀಕ್ ಈವೆಂಟ್‌ನಲ್ಲಿ ಭಾಗವಹಿಸಿದ ಅವಸ್ಥಿ ಅವರು ಜನವರಿ 2022 ರಲ್ಲಿ ಕಂಪೆನಿಯನ್ನು ಪ್ರಾರಂಭಿಸಿದ ಬಗ್ಗೆ ಮಾತನಾಡಿದ್ದಾಳೆ. ಜೊತೆಗೆ ಸುಮಾರು 3.7 ಕೋಟಿ ರೂಪಾಯಿಗಳ ಹೂಡಿಕೆ ಪಡೆಯುವಲ್ಲಿ ಯಶಸ್ವಿಯಾದೆ ಎಂದು ಬಹಿರಂಗಪಡಿಸಿದ್ದಾಳೆ. Delv.AI ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ತಿಳಿಸಿರುವಂತೆ 10 ಜನರ ಬಲಿಷ್ಠ ತಂಡ ಇದರಲ್ಲಿ ಕೆಲಸ ಮಾಡುತ್ತಿದೆ.

Advertisement
Advertisement
Advertisement

ಈ ಈವೆಂಟ್‌ನಲ್ಲಿ ಅವಸ್ಥಿ ತನ್ನ ಉದ್ಯಮಶೀಲತೆಯ ಪ್ರಯಾಣಕ್ಕೆ ತನ್ನ ತಂದೆಯೇ ಮೊದಲ ಪ್ರೇರಣೆ ಎಂದಿದ್ದಾರೆ. ಟೆಕ್‌ ಉದ್ಯಮದ ಬಗ್ಗೆ ನನಗೆ ಪ್ರೇರಣೆಯಾಗಿದ್ದು ತನ್ನ ಇಂಜಿನಿಯರ್‌ ತಂದೆ ಎಂದಿದ್ದಾರೆ.

ಶಾಲೆಗಳಲ್ಲಿ ಕಂಪ್ಯೂಟರ್ ಸೈನ್ಸ್ ಶಿಕ್ಷಣಕ್ಕಾಗಿ ತನ್ನ ಇಂಜಿನಿಯರ್ ತಂದೆ ಪ್ರೋತ್ಸಾಹಿಸಿದರು. ಇದರಿಂದ ನಾನು ಪ್ರಭಾವಿತಳಾದೆ. ಅವರ ಪ್ರೋತ್ಸಾಹದಿಂದ ಕೇವಲ ಏಳನೇ ವಯಸ್ಸಿನಲ್ಲಿ ಕೋಡಿಂಗ್ ಮಾಡುವುದನ್ನು ಕಲಿತೆ ಎಂದಿದ್ದಾರೆ. ಇದು ನನ್ನ ಪ್ರಮುಖ ಸಾಧನೆಗೆ ಅಡಿಪಾಯ ಹಾಕಿತು ಎಂದಿದ್ದಾರೆ.

ಪ್ರಾಂಜಲಿಯು ತನ್ನ ಉದ್ಯಮಶೀಲತೆಯ ಪ್ರಯಾಣಕ್ಕೆ ಲಾಭದಾಯಕವಾದ ವ್ಯಾಪಾರ ಕೌಶಲ್ಯಗಳನ್ನು ಪಡೆಯಲು ಭವಿಷ್ಯದಲ್ಲಿ ಉನ್ನತ ಶಿಕ್ಷಣ ಮಾಡುವ ಬಗ್ಗೆ ತೀರ್ಮಾನಿಸಿದ್ದಾಳೆ. ಸಣ್ಣ ಮತ್ತು ಕ್ರಿಯಾತ್ಮಕ ತಂಡವನ್ನು ಮುನ್ನಡೆಸುತ್ತಿರುವ ಪ್ರಾಂಜಲಿ, ಕೋಡಿಂಗ್‌ನಿಂದ ಕಾರ್ಯಾಚರಣೆಗಳು ಮತ್ತು ಗ್ರಾಹಕ ಸೇವೆಯವರೆಗೆ Delv.AI ನ ವಿವಿಧ ಅಂಶಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago